24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಆಶ್ರಯದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಾ.19ರಂದು “ಚಾಂದ್ರಮಾನ ಯುಗಾದಿ” ಪರಾಭವ ನಾಮ ಸಂವತ್ಸರಾರಂಭದ ಅಂಗವಾಗಿ ಬೆಳಿಗ್ಗೆ ೮ರಿಂದ ದೀಪ ಪ್ರಜ್ವಲನ, ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ವಿಶೇಷ ಪೂಜೆ, ಪಂಚಾಂಗ ಶ್ರವಣ, ಬೇವು ಬೆಲ್ಲ ವಿತರಣೆ ಹಾಗೂ ಗೀತಾ ಗ್ರಾಮ ಅನುಷ್ಠಾನದ ಪ್ರಯುಕ್ತ ರಾಮಾಯಣ ತರಗತಿ ಆರಂಭವಾಗುವುದು ಎಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದೀಪ ಪ್ರಜ್ವಲನೆಯನ್ನು ಲ್ಯಾಲ ಪ್ರಸನ್ನ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಪ್ರಸನ್ನ ಗಂಗಾಧರ ಗೌಡ ಮತ್ತು ಗಂಗಾಧರ ಗೌಡ ದಂಪತಿಗಳು ನೆರವೇರಿಸಲಿರುವರು. ನಿವೃತ್ತ ಪ್ರಾಚಾರ್ಯ ಗಣಪತಿ ಭಟ್ ಕುಳಮರ್ವ ಗೌರವ ಉಪಸ್ಥಿತಿ ವಹಿಸಲಿರುವರು.

ಪ್ರತಿ ಶನಿವಾರ ಸಂಜೆ ಗಂಟೆ 7.00 ರಿಂದ ಭಜನೆ, ರಾತ್ರಿ ಗಂಟೆ 8.00ರಿಂದ ವಿಷ್ಣುಸಹಸ್ರನಾಮ ತರಗತಿ ನಡೆಯಲಿರುವುದು ಹಾಗೂ ಮುಂದಿನ ದಿನಗಳಲ್ಲಿ ರಾಮಾಯಣ ತರಗತಿ ನಡೆಯಲಿದೆ. ಊರ ಪರವೂರ ಎಲ್ಲಾ ಭಗವದ್ಭಕ್ತರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದೆ.

Related posts

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!