September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ ಮಾ.17ರಂದು ಮುಂಡಾಜೆಯ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು.

ನಿಡ್ಲೆಯ ಉದ್ಯಮಿ ಲಲಿತಾ ಲಕ್ಷ್ಮೀಶ ರಾವ್ ಕಾರ್ಯಕ್ರಮ ಉದ್ಘಾಟಿಸಿ ಸಾಧನೆಗೆ ಪ್ರಯತ್ನದ ಜತೆ ಛಲವು ಇರಬೇಕು. ಹಿರಿಯರನ್ನು ಗೌರವಯುತವಾಗಿ ಕಾಣುವುದರೊಂದಿಗೆ ಅವರ ಸಲಹೆ ಸೂಚನೆಗಳೊಂದಿಗೆ ಮುಂದುವರಿದರೆ ಉನ್ನತಿ ಗಳಿಸಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿತ್ಪಾವನ ಬ್ರಾಹ್ಮಣ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಮಾತನಾಡಿ ಮಹಿಳಾ ವಿಭಾಗ ಸ್ಥಾಪನೆಯಿಂದ ಸಂಘದ ಬಲ ಹೆಚ್ಚಿದೆ. ಮಹಿಳೆಯರ ಸಾಧನೆಗಳಿಗೆ ಉತ್ತಮ ವೇದಿಕೆ ನಿರ್ಮಾಣವಾಗಿದೆ ಎಂದರು.

ನೂತನ ಅಧ್ಯಕ್ಷೆ ಅಶ್ವಿನಿ ಎ. ಹೆಬ್ಬಾರ್ ಮಾತನಾಡಿ ಸಂಘಟನೆಗಳು ಸಾಧನೆಗೆ ಪ್ರೇರಣೆ ನೀಡುತ್ತವೆ. ಸಮಾಜದಲ್ಲಿ ಮಹಿಳೆಯರು ಸಾಕಷ್ಟು ಸಾಧನೆಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.

ಶಿವಳ್ಳಿ ಮಹಿಳಾ ಘಟಕದ ಅಧ್ಯಕ್ಷೆ ಜಯಾ ಅನಂತ ಕೃಷ್ಣ ಅರ್ಮುಡತ್ತಾಯ, ಸ್ಥಾನಿಕ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ರಾವ್, ಚಿತ್ಪಾವನ ಸಂಘದ ಭಾರತಿ ಫಡಕೆ, ನಾರಾಯಣ ಫಡಕೆ ಶುಭ ಹಾರೈಸಿದರು.

ತಾಲೂಕು ಚಿತ್ಪಾವನ ಸಂಘಟನೆ ಕಾರ್ಯದರ್ಶಿ ಸುಷ್ಮಾ ಭಿಡೆ ಸ್ವಾಗತಿಸಿದರು. ಚಿತ್ರಾ ಭಿಡೆ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಘಟಕದ ಕಾರ್ಯದರ್ಶಿ ಡಾ. ದೀಪಾಲಿ ಡೋಂಗ್ರೆ ವಂದಿಸಿದರು. ಖಜಾಂಜಿ ಡಾ. ಸುಷ್ಮಾ ಡೋಂಗ್ರೆ ಅತಿಥಿಗಳ ಪರಿಚಯ ನೀಡಿದರು.

Related posts

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಗುರುವಾಯನಕೆರೆ ಎನ್‌ಇಟಿ ಕಾಲೇಜಿನಲ್ಲಿ ಓಣಂ ಸಂಭ್ರಮ: ಮಾವೇಲಿ ಪುರಪ್ರವೇಶ-ಚೆಂಡೆನಾದಕ್ಕೆ ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

Suddi Udaya
error: Content is protected !!