26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ ಮಾ.17ರಂದು ಮುಂಡಾಜೆಯ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು.

ನಿಡ್ಲೆಯ ಉದ್ಯಮಿ ಲಲಿತಾ ಲಕ್ಷ್ಮೀಶ ರಾವ್ ಕಾರ್ಯಕ್ರಮ ಉದ್ಘಾಟಿಸಿ ಸಾಧನೆಗೆ ಪ್ರಯತ್ನದ ಜತೆ ಛಲವು ಇರಬೇಕು. ಹಿರಿಯರನ್ನು ಗೌರವಯುತವಾಗಿ ಕಾಣುವುದರೊಂದಿಗೆ ಅವರ ಸಲಹೆ ಸೂಚನೆಗಳೊಂದಿಗೆ ಮುಂದುವರಿದರೆ ಉನ್ನತಿ ಗಳಿಸಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿತ್ಪಾವನ ಬ್ರಾಹ್ಮಣ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಮಾತನಾಡಿ ಮಹಿಳಾ ವಿಭಾಗ ಸ್ಥಾಪನೆಯಿಂದ ಸಂಘದ ಬಲ ಹೆಚ್ಚಿದೆ. ಮಹಿಳೆಯರ ಸಾಧನೆಗಳಿಗೆ ಉತ್ತಮ ವೇದಿಕೆ ನಿರ್ಮಾಣವಾಗಿದೆ ಎಂದರು.

ನೂತನ ಅಧ್ಯಕ್ಷೆ ಅಶ್ವಿನಿ ಎ. ಹೆಬ್ಬಾರ್ ಮಾತನಾಡಿ ಸಂಘಟನೆಗಳು ಸಾಧನೆಗೆ ಪ್ರೇರಣೆ ನೀಡುತ್ತವೆ. ಸಮಾಜದಲ್ಲಿ ಮಹಿಳೆಯರು ಸಾಕಷ್ಟು ಸಾಧನೆಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.

ಶಿವಳ್ಳಿ ಮಹಿಳಾ ಘಟಕದ ಅಧ್ಯಕ್ಷೆ ಜಯಾ ಅನಂತ ಕೃಷ್ಣ ಅರ್ಮುಡತ್ತಾಯ, ಸ್ಥಾನಿಕ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ರಾವ್, ಚಿತ್ಪಾವನ ಸಂಘದ ಭಾರತಿ ಫಡಕೆ, ನಾರಾಯಣ ಫಡಕೆ ಶುಭ ಹಾರೈಸಿದರು.

ತಾಲೂಕು ಚಿತ್ಪಾವನ ಸಂಘಟನೆ ಕಾರ್ಯದರ್ಶಿ ಸುಷ್ಮಾ ಭಿಡೆ ಸ್ವಾಗತಿಸಿದರು. ಚಿತ್ರಾ ಭಿಡೆ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಘಟಕದ ಕಾರ್ಯದರ್ಶಿ ಡಾ. ದೀಪಾಲಿ ಡೋಂಗ್ರೆ ವಂದಿಸಿದರು. ಖಜಾಂಜಿ ಡಾ. ಸುಷ್ಮಾ ಡೋಂಗ್ರೆ ಅತಿಥಿಗಳ ಪರಿಚಯ ನೀಡಿದರು.

Related posts

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!