25 C
ಪುತ್ತೂರು, ಬೆಳ್ತಂಗಡಿ
March 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಆಶ್ರಯದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಾ.19ರಂದು “ಚಾಂದ್ರಮಾನ ಯುಗಾದಿ” ಪರಾಭವ ನಾಮ ಸಂವತ್ಸರಾರಂಭದ ಅಂಗವಾಗಿ ಬೆಳಿಗ್ಗೆ ೮ರಿಂದ ದೀಪ ಪ್ರಜ್ವಲನ, ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ವಿಶೇಷ ಪೂಜೆ, ಪಂಚಾಂಗ ಶ್ರವಣ, ಬೇವು ಬೆಲ್ಲ ವಿತರಣೆ ಹಾಗೂ ಗೀತಾ ಗ್ರಾಮ ಅನುಷ್ಠಾನದ ಪ್ರಯುಕ್ತ ರಾಮಾಯಣ ತರಗತಿ ಆರಂಭವಾಗುವುದು ಎಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದೀಪ ಪ್ರಜ್ವಲನೆಯನ್ನು ಲ್ಯಾಲ ಪ್ರಸನ್ನ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಪ್ರಸನ್ನ ಗಂಗಾಧರ ಗೌಡ ಮತ್ತು ಗಂಗಾಧರ ಗೌಡ ದಂಪತಿಗಳು ನೆರವೇರಿಸಲಿರುವರು. ನಿವೃತ್ತ ಪ್ರಾಚಾರ್ಯ ಗಣಪತಿ ಭಟ್ ಕುಳಮರ್ವ ಗೌರವ ಉಪಸ್ಥಿತಿ ವಹಿಸಲಿರುವರು.

ಪ್ರತಿ ಶನಿವಾರ ಸಂಜೆ ಗಂಟೆ 7.00 ರಿಂದ ಭಜನೆ, ರಾತ್ರಿ ಗಂಟೆ 8.00ರಿಂದ ವಿಷ್ಣುಸಹಸ್ರನಾಮ ತರಗತಿ ನಡೆಯಲಿರುವುದು ಹಾಗೂ ಮುಂದಿನ ದಿನಗಳಲ್ಲಿ ರಾಮಾಯಣ ತರಗತಿ ನಡೆಯಲಿದೆ. ಊರ ಪರವೂರ ಎಲ್ಲಾ ಭಗವದ್ಭಕ್ತರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದೆ.

Related posts

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya
error: Content is protected !!