28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಆಶ್ರಯದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಾ.19ರಂದು “ಚಾಂದ್ರಮಾನ ಯುಗಾದಿ” ಪರಾಭವ ನಾಮ ಸಂವತ್ಸರಾರಂಭದ ಅಂಗವಾಗಿ ಬೆಳಿಗ್ಗೆ ೮ರಿಂದ ದೀಪ ಪ್ರಜ್ವಲನ, ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ವಿಶೇಷ ಪೂಜೆ, ಪಂಚಾಂಗ ಶ್ರವಣ, ಬೇವು ಬೆಲ್ಲ ವಿತರಣೆ ಹಾಗೂ ಗೀತಾ ಗ್ರಾಮ ಅನುಷ್ಠಾನದ ಪ್ರಯುಕ್ತ ರಾಮಾಯಣ ತರಗತಿ ಆರಂಭವಾಗುವುದು ಎಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದೀಪ ಪ್ರಜ್ವಲನೆಯನ್ನು ಲ್ಯಾಲ ಪ್ರಸನ್ನ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಪ್ರಸನ್ನ ಗಂಗಾಧರ ಗೌಡ ಮತ್ತು ಗಂಗಾಧರ ಗೌಡ ದಂಪತಿಗಳು ನೆರವೇರಿಸಲಿರುವರು. ನಿವೃತ್ತ ಪ್ರಾಚಾರ್ಯ ಗಣಪತಿ ಭಟ್ ಕುಳಮರ್ವ ಗೌರವ ಉಪಸ್ಥಿತಿ ವಹಿಸಲಿರುವರು.

ಪ್ರತಿ ಶನಿವಾರ ಸಂಜೆ ಗಂಟೆ 7.00 ರಿಂದ ಭಜನೆ, ರಾತ್ರಿ ಗಂಟೆ 8.00ರಿಂದ ವಿಷ್ಣುಸಹಸ್ರನಾಮ ತರಗತಿ ನಡೆಯಲಿರುವುದು ಹಾಗೂ ಮುಂದಿನ ದಿನಗಳಲ್ಲಿ ರಾಮಾಯಣ ತರಗತಿ ನಡೆಯಲಿದೆ. ಊರ ಪರವೂರ ಎಲ್ಲಾ ಭಗವದ್ಭಕ್ತರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದೆ.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!