24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ಆಶ್ರಯದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಾ.19ರಂದು “ಚಾಂದ್ರಮಾನ ಯುಗಾದಿ” ಪರಾಭವ ನಾಮ ಸಂವತ್ಸರಾರಂಭದ ಅಂಗವಾಗಿ ಬೆಳಿಗ್ಗೆ ೮ರಿಂದ ದೀಪ ಪ್ರಜ್ವಲನ, ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ವಿಶೇಷ ಪೂಜೆ, ಪಂಚಾಂಗ ಶ್ರವಣ, ಬೇವು ಬೆಲ್ಲ ವಿತರಣೆ ಹಾಗೂ ಗೀತಾ ಗ್ರಾಮ ಅನುಷ್ಠಾನದ ಪ್ರಯುಕ್ತ ರಾಮಾಯಣ ತರಗತಿ ಆರಂಭವಾಗುವುದು ಎಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದೀಪ ಪ್ರಜ್ವಲನೆಯನ್ನು ಲ್ಯಾಲ ಪ್ರಸನ್ನ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಪ್ರಸನ್ನ ಗಂಗಾಧರ ಗೌಡ ಮತ್ತು ಗಂಗಾಧರ ಗೌಡ ದಂಪತಿಗಳು ನೆರವೇರಿಸಲಿರುವರು. ನಿವೃತ್ತ ಪ್ರಾಚಾರ್ಯ ಗಣಪತಿ ಭಟ್ ಕುಳಮರ್ವ ಗೌರವ ಉಪಸ್ಥಿತಿ ವಹಿಸಲಿರುವರು.

ಪ್ರತಿ ಶನಿವಾರ ಸಂಜೆ ಗಂಟೆ 7.00 ರಿಂದ ಭಜನೆ, ರಾತ್ರಿ ಗಂಟೆ 8.00ರಿಂದ ವಿಷ್ಣುಸಹಸ್ರನಾಮ ತರಗತಿ ನಡೆಯಲಿರುವುದು ಹಾಗೂ ಮುಂದಿನ ದಿನಗಳಲ್ಲಿ ರಾಮಾಯಣ ತರಗತಿ ನಡೆಯಲಿದೆ. ಊರ ಪರವೂರ ಎಲ್ಲಾ ಭಗವದ್ಭಕ್ತರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದೆ.

Related posts

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya
error: Content is protected !!