24.7 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ರಿ) ಯಲ್ಲಿ ಗ್ರಾಹಕರ ಠೇವಣಿ ಇಟ್ಟಿದ್ದ ಸುಮಾರು 30 ಕೋಟಿ ರೂಪಾಯಿ ಹಣವನ್ನು ವಂಚನೆ ಮಾಡಿದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಸೊಸೈಟಿಯಲ್ಲಿ ನಡೆಸಿದ ಎರಡು ದಿನದ ಶೋಧ ಕಾರ್ಯಾಚರಣೆ ಅಂತ್ಯ ಮಾಡಿ ದಾಖಲೆ ಪತ್ರಗಳನ್ನು ಮಹಜರು ಮಾಡಿ ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ನಗರದ ರಾಮನಗರದ ವಿ.ಆರ್.ನಾಯಕ್ ಕಾಂಪೌಂಡ್ ನಲ್ಲಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಗೆ ಬೆಂಗಳೂರಿನ ಸಿಐಡಿ ಅಧಿಕಾರಿಗಳ ತಂಡ ಮಾ.17 ರಂದು ಬೆಳಗ್ಗೆ 11 ಗಂಟೆಗೆ ಆಗಮಿಸಿ ರಾತ್ರಿ 7:45 ವರೆಗೆ ಶೋಧ ನಡೆಸಿ ಬಳಿಕ ಮಾ.18 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶೋಧ ಕಾರ್ಯಾಚರಣೆ ನಡೆಸಿ ಸೊಸೈಟಿಯಲ್ಲಿ ಗ್ರಾಹಕರಿಗೆ ಮತ್ತು ಸೊಸೈಟಿಗೆ ಸಂಬಂಧಿಸಿದ ಪ್ರಮುಖ ದಾಖಲೆ ಪತ್ರಗಳು , ಕಂಪ್ಯೂಟರಿನ ಮೂರು ಹಾರ್ಡ್ ಡಿಸ್ಕ್, ಎಸ್‌.ಎಸ್.ಡಿ, ಒಂದು ಸಿಸಿಕ್ಯಾಮಾರದ ಡಿವಿಆರ್,ಸೊಸೈಟಿಯ ಭದ್ರತಾ ಠೇವಣಿ ಇರಿಸಿರುವ 27 ಲಕ್ಷದ ಚೆಕ್, 80 ಗ್ರಾಂ ಚಿನ್ನಾಭರಣಗಳು ಸೇರಿ ಹಲವು ವಸ್ತುಗಳನ್ನು ಸರಕಾರಿ ಪಂಚರುಗಳ ಸಮ್ಮುಖದಲ್ಲಿ ಮಹಜರು ಮಾಡಿ ವಶಪಡಿಸಿಕೊಂಡು ವಾಪಸ್ ತೆರಳಿದ್ದಾರೆ.

ಬೆಂಗಳೂರು ಡೆಪಾಸಿಟ್ ಫ್ರಾಂಡ್ ವಿಂಗ್ ಸಿಐಡಿ ಇನ್ಸ್‌ಪೆಕ್ಟರ್ ಹರೀಶ್, ಎಎಸ್ಐ ಶಂಕರ್, ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಸಿಬ್ಬಂದಿ ಕಿರಣ್, ಶಿವರಾಜ್, ಬೆಳ್ತಂಗಡಿ ಕಂದಾಯ ಇಲಾಖೆಯ ಎಸ್.ಡಿ.ಎ ಪ್ರಜ್ವಲ್, ಗ್ರಾಮ ಆಡಳಿತಾಧಿಕಾರಿ ಸತೀಶ್ , ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಇಲಾಖೆಯ ಸಿಡಿಒ ಎನ್.ಜೆ.ಗೋಪಾಲ್, ದೂರುದಾರ ದಯಾನಂದ್ ನಾಯಕ್, ಸಿಐಡಿ ವಾಹನ ಚಾಲಕ ಸುಂದರ್ ಶೋಧ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya
error: Content is protected !!