May 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

ಬೆಳ್ತಂಗಡಿ : ತನ್ನ ಶಾಲಾ ಸ್ನೇಹಿತರೊಂದಿಗೆ ಜಾತ್ರೆಗೆ ಬಂದಿದ್ದ ಅನ್ಯ ಧರ್ಮದ ಅಪ್ರಾಪ್ತ ಬಾಲಕನಿಗೆ (17ವ) ಜಾತ್ರಾ ಸ್ಥಳದಲ್ಲಿದ್ದ ಕೆಲವರು, ತಮ್ಮ ಧರ್ಮದ ಬಾಲಕಿಯರೊಂದಿಗೆ ಅನ್ಯ ಧರ್ಮದ ಬಾಲಕನು ಜಾತ್ರೆಗೆ ಬಂದಿರುವುದಾಗಿ ಅಕ್ಷೇಪಿಸಿ, ಬಾಲಕನಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವುದಾಗಿ ಬಾಲಕನ ತಂದೆ ಘಟನೆ ನಡೆದು ಏಳು ದಿನಗಳ ಬಳಿಕ ಮಾ.18ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಾಲಕ ಮಾ.11 ರಂದು ಉಜಿರೆ ಜಾತ್ರೆಗೆ ಬಂದಿದ್ದು, ರಾತ್ರಿ 10.30 ರ ಸುಮಾರಿಗೆ ಜಾತ್ರೆಯಲ್ಲಿ ಜಾಯಿಂಟ್ ವೀಲ್‌ನ ಹತ್ತಿರ ಸಹಪಾಠಿ ವಿದ್ಯಾರ್ಥಿನಿಯರು ಮೊಬೈಲ್‌ನ್ನು ಆತನಲ್ಲಿ ಕೊಟ್ಟು ಅವರು ಆಟ ಆಡಲು ಹೋದಾಗ, ಅವರ ಬರುವಿಕೆಯನ್ನು ಕಾಯುತ್ತಿರುವ ಸಂದರ್ಭ ಅಲ್ಲಿಗೆ ಬಂದ ಕೆಲವರು ನಮ್ಮ ಧರ್ಮದ ಹುಡುಗಿಯರೊಂದಿಗೆ ಅನ್ಯ ಧರ್ಮದ ಬಾಲಕನು ಜಾತ್ರೆಗೆ ಬಂದಿರುವುದಾಗಿ ಅಕ್ಷೇಪಿಸಿ, ಬಾಲಕನಿಗೆ ಹಲ್ಲೆ ನಡೆಸಿ ನಿಂದಿಸಿರುತ್ತಾರೆ ಹಾಗೂ ಸದ್ರಿ ಬಾಲಕನನ್ನು ಅಲ್ಲಿಂದ ಬೈಕಿನಲ್ಲಿ ದೂರ ಕರೆತಂದು ಹಲ್ಲೆ ನಡೆಸಿ, ಬಾಲಕನಿಂದ ತಾನೇ ಜಾತ್ರಾ ಸ್ಥಳದಲ್ಲಿ ತಪ್ಪು ಮಾಡಿರುವುದಾಗಿ ವಿಡಿಯೋ ಹೇಳಿಕೆ ದಾಖಲಿಸಿಕೊಂಡು ಆತನನ್ನು ಕಳುಹಿಸಿರುತ್ತಾರೆ.

ಈ ಘಟನೆಯಿಂದ ಬಾಲಕನು ಕೆಲದಿನಗಳಿಂದ ಭಯಭೀತನಾಗಿದ್ದಾನೆ ಎಂಬುದಾಗಿ ಬಾಲಕನ ತಂದೆ ಮಾ.18 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 30/2026, ಕಲಂ: 137(2), 115(2), 351(2) , 352, 352(2) ಜೊತೆಗೆ 190 ಬಿಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಜು.3: ವಿದ್ಯುತ್ ನಿಲುಗಡೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya
error: Content is protected !!