25.1 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

ಬೆಳ್ತಂಗಡಿ : ತನ್ನ ಶಾಲಾ ಸ್ನೇಹಿತರೊಂದಿಗೆ ಜಾತ್ರೆಗೆ ಬಂದಿದ್ದ ಅನ್ಯ ಧರ್ಮದ ಅಪ್ರಾಪ್ತ ಬಾಲಕನಿಗೆ (17ವ) ಜಾತ್ರಾ ಸ್ಥಳದಲ್ಲಿದ್ದ ಕೆಲವರು, ತಮ್ಮ ಧರ್ಮದ ಬಾಲಕಿಯರೊಂದಿಗೆ ಅನ್ಯ ಧರ್ಮದ ಬಾಲಕನು ಜಾತ್ರೆಗೆ ಬಂದಿರುವುದಾಗಿ ಅಕ್ಷೇಪಿಸಿ, ಬಾಲಕನಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವುದಾಗಿ ಬಾಲಕನ ತಂದೆ ಘಟನೆ ನಡೆದು ಏಳು ದಿನಗಳ ಬಳಿಕ ಮಾ.18ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಾಲಕ ಮಾ.11 ರಂದು ಉಜಿರೆ ಜಾತ್ರೆಗೆ ಬಂದಿದ್ದು, ರಾತ್ರಿ 10.30 ರ ಸುಮಾರಿಗೆ ಜಾತ್ರೆಯಲ್ಲಿ ಜಾಯಿಂಟ್ ವೀಲ್‌ನ ಹತ್ತಿರ ಸಹಪಾಠಿ ವಿದ್ಯಾರ್ಥಿನಿಯರು ಮೊಬೈಲ್‌ನ್ನು ಆತನಲ್ಲಿ ಕೊಟ್ಟು ಅವರು ಆಟ ಆಡಲು ಹೋದಾಗ, ಅವರ ಬರುವಿಕೆಯನ್ನು ಕಾಯುತ್ತಿರುವ ಸಂದರ್ಭ ಅಲ್ಲಿಗೆ ಬಂದ ಕೆಲವರು ನಮ್ಮ ಧರ್ಮದ ಹುಡುಗಿಯರೊಂದಿಗೆ ಅನ್ಯ ಧರ್ಮದ ಬಾಲಕನು ಜಾತ್ರೆಗೆ ಬಂದಿರುವುದಾಗಿ ಅಕ್ಷೇಪಿಸಿ, ಬಾಲಕನಿಗೆ ಹಲ್ಲೆ ನಡೆಸಿ ನಿಂದಿಸಿರುತ್ತಾರೆ ಹಾಗೂ ಸದ್ರಿ ಬಾಲಕನನ್ನು ಅಲ್ಲಿಂದ ಬೈಕಿನಲ್ಲಿ ದೂರ ಕರೆತಂದು ಹಲ್ಲೆ ನಡೆಸಿ, ಬಾಲಕನಿಂದ ತಾನೇ ಜಾತ್ರಾ ಸ್ಥಳದಲ್ಲಿ ತಪ್ಪು ಮಾಡಿರುವುದಾಗಿ ವಿಡಿಯೋ ಹೇಳಿಕೆ ದಾಖಲಿಸಿಕೊಂಡು ಆತನನ್ನು ಕಳುಹಿಸಿರುತ್ತಾರೆ.

ಈ ಘಟನೆಯಿಂದ ಬಾಲಕನು ಕೆಲದಿನಗಳಿಂದ ಭಯಭೀತನಾಗಿದ್ದಾನೆ ಎಂಬುದಾಗಿ ಬಾಲಕನ ತಂದೆ ಮಾ.18 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 30/2026, ಕಲಂ: 137(2), 115(2), 351(2) , 352, 352(2) ಜೊತೆಗೆ 190 ಬಿಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

Suddi Udaya

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya
error: Content is protected !!