34.2 C
ಪುತ್ತೂರು, ಬೆಳ್ತಂಗಡಿ
March 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮಾಜಿ ಅಧ್ಯಕ್ಷ ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯ ಸ್ಮರಣೆಯನ್ನು ಇತ್ತೀಚೆಗೆ ದಯಾ ವಿಶೇಷಾ ಚೇತನರ ಶಾಲೆ ಹಾಗೂ ಅನುಗ್ರಹ ವೃದ್ಧಾಶ್ರಮ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು.

ದಿ. ಎನ್ ಪದ್ಮನಾಭ ಮಾಣಿಂಜ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಸೇವೆ ಹಾಗೂ ಸಮಾಜದ ಮೇಲಿನ ಕೊಡುಗಗಳನ್ನು ಸ್ಮರಿಸಲಾಯಿತು.

ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು ಸಹಬೋಜನ ನಡೆಸಲಾಯಿತು.

ಸಂಘದ ಅಧ್ಯಕ್ಷ ಭಗೀರಥ ಜಿ, ಮಾತನಾಡಿ ನಮ್ಮನ್ನು ಅಗಲಿದ ದಿವ್ಯ ಚೇತನ ಪದ್ಮನಾಭ ಮಾಣಿಂಜರವರ ಸೇವಾ ಕಾರ್ಯಗಳ ಬಗ್ಗೆ ಸ್ಮರಿಸಿದರು. ಗೌರವಾನ್ವಿತರ ಮೊದಲ ವರ್ಷದ ಪುಣ್ಯಸ್ಮರಣೆಯನ್ನು ದೇವರ ಮಕ್ಕಳೊಂದಿಗೆ ಆಚರಿಸಿರುವುದು ನಿಜಕ್ಕೂ ಖುಷಿಯನ್ನು ನೀಡಿದೆ ಇಲ್ಲಿನ ವ್ಯವಸ್ಥೆ ಹಾಗೂ ಶಿಕ್ಷಕರ ಕಾರ್ಯವೈಖರಿಯ ಬಗ್ಗೆ ಪ್ರಶಂಸೆಯ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ನಿರ್ದೇಶಕರಾದ ಚಂದ್ರಶೇಖರ, ಜಯವಿಕ್ರಮ ಕಲ್ಲಾಪು, ದಯಾ ವಿಶೇಷ ಶಾಲೆಯ ಪಾ. ವಿನೋದ್, ಸಮಗದ ವಿಶೇಷಾಧಿಕಾರಿ ಯಂ ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ ಕುಮಾರ್, ಕೇಂದ್ರ ಕಚೇರಿ ಅಧಿಕಾರಿ ವರ್ಗ, ಶಾಖಾ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya
error: Content is protected !!