May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮಾಜಿ ಅಧ್ಯಕ್ಷ ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯ ಸ್ಮರಣೆಯನ್ನು ಇತ್ತೀಚೆಗೆ ದಯಾ ವಿಶೇಷಾ ಚೇತನರ ಶಾಲೆ ಹಾಗೂ ಅನುಗ್ರಹ ವೃದ್ಧಾಶ್ರಮ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು.

ದಿ. ಎನ್ ಪದ್ಮನಾಭ ಮಾಣಿಂಜ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಸೇವೆ ಹಾಗೂ ಸಮಾಜದ ಮೇಲಿನ ಕೊಡುಗಗಳನ್ನು ಸ್ಮರಿಸಲಾಯಿತು.

ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು ಸಹಬೋಜನ ನಡೆಸಲಾಯಿತು.

ಸಂಘದ ಅಧ್ಯಕ್ಷ ಭಗೀರಥ ಜಿ, ಮಾತನಾಡಿ ನಮ್ಮನ್ನು ಅಗಲಿದ ದಿವ್ಯ ಚೇತನ ಪದ್ಮನಾಭ ಮಾಣಿಂಜರವರ ಸೇವಾ ಕಾರ್ಯಗಳ ಬಗ್ಗೆ ಸ್ಮರಿಸಿದರು. ಗೌರವಾನ್ವಿತರ ಮೊದಲ ವರ್ಷದ ಪುಣ್ಯಸ್ಮರಣೆಯನ್ನು ದೇವರ ಮಕ್ಕಳೊಂದಿಗೆ ಆಚರಿಸಿರುವುದು ನಿಜಕ್ಕೂ ಖುಷಿಯನ್ನು ನೀಡಿದೆ ಇಲ್ಲಿನ ವ್ಯವಸ್ಥೆ ಹಾಗೂ ಶಿಕ್ಷಕರ ಕಾರ್ಯವೈಖರಿಯ ಬಗ್ಗೆ ಪ್ರಶಂಸೆಯ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ನಿರ್ದೇಶಕರಾದ ಚಂದ್ರಶೇಖರ, ಜಯವಿಕ್ರಮ ಕಲ್ಲಾಪು, ದಯಾ ವಿಶೇಷ ಶಾಲೆಯ ಪಾ. ವಿನೋದ್, ಸಮಗದ ವಿಶೇಷಾಧಿಕಾರಿ ಯಂ ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ ಕುಮಾರ್, ಕೇಂದ್ರ ಕಚೇರಿ ಅಧಿಕಾರಿ ವರ್ಗ, ಶಾಖಾ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

Suddi Udaya

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya
error: Content is protected !!