25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಮಾ.22: ಉಜಿರೆಯಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಕೀರ್ತಿಶೇಷ ಡಾ. ಬಿ. ಯಶೋವರ್ಮ ಮತ್ತು ಕೀರ್ತಿಶೇಷ ಪ್ರೊ. ಎಸ್. ಪ್ರಭಾಕರ್ ರವರಿಗೆ ಅರ್ಪಣೆಯಾಗಲಿರುವ ೫೦೦ ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಮಾ.೨೨ ರಂದು ಸಂಜೆ ೬;೧೫ಕ್ಕೆ ಸರಿಯಾಗಿ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ಕೀರ್ತಿಶೇಷ ಯು. ವಿಜಯರಾಘವ ಪಡುವೆಟ್ನಾಯ ವೇದಿಕೆಯಲ್ಲಿ ನಡೆಯಲಿದೆ.

ಭಾರತೀಯ ಕಲೆ, ಸಂಸ್ಕೃತಿ ಮತ್ತು ಜಾನಪದದ ಭವ್ಯ ಪ್ರದರ್ಶನವನ್ನು ಪಸರಿಸುವ ಆಳ್ವಾಸ್ ಸಾಂಸ್ಕೃತಿಕ ವೈಭವದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ೫೦೦ಮಂದಿ ವಿದ್ಯಾರ್ಥಿ ಕಲಾವಿದರಿಂದ ಯೋಗದೀಪಿಕ, ಶಾಸ್ತ್ರೀಯ ನೃತ್ಯ- ಅಷ್ಟಲಕ್ಷ್ಮೀ, ಬಡಗುತಿಟ್ಟು ಯಕ್ಷಗಾನ-ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯಾ ನೃತ್ಯ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಮಲ್ಲಕಂಬ ಹಾಗೂ ರೋಪ್ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ನೃತ್ಯ-ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ-ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಗಳು ಸುಮಾರು ಮೂರುವರೇ ಗಂಟೆಗಳ ಕಾಲ ಪ್ರೇಕ್ಷಕರನ್ನು ಮನರಂಜಿಸಲಿವೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಸೇರಿದಂತೆ ೬ ಸಾವಿರ ಜನರು ಭಾಗವಹಿಸಲಿದ್ದಾರೆ.

ಭವ್ಯ ಪರಂಪರೆ ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶ:
ಆಳ್ವಾಸ್ ಸಾಂಸ್ಕೃತಿಕ ವೈಭವ ಕೇವಲ ಮನೋರಂಜನೆ ನೀಡುವುದು ಮಾತ್ರವಲ್ಲ, ಜೊತೆಗೆ ಹಲವಾರು ಸಂದೇಶಗಳನ್ನು ನೀಡುವುದು ನಮ್ಮ ಉದ್ದೇಶ. ಶಾಸ್ತ್ರೀಯ, ಜಾನಪದ ಕಲೆಯನ್ನು ಭವ್ಯ ಪರಂಪರೆಯನ್ನು ನಮ್ಮ ಹಿರಿಯರು ನಮಗಾಗಿ ನೀಡಿದ್ದಾರೆ, ಆ ಸಂಪತ್ತನ್ನು ಮುಂದಿನ ಪೀಳಿಗೆಗೂ ತಲುಪಬೇಕೆಂಬ ಉದ್ದೇಶದಿಂದ ವಿದ್ಯಾರ್ಥಿಗಳ ಮೂಲಕ ಕಲಾ ಪ್ರದರ್ಶನವನ್ನು ನೀಡುತ್ತಿದ್ದೇವೆ. ಉಜಿರೆಯಲ್ಲಿ ನಡೆಯುವ ಸಾಂಸ್ಕೃತಿಕ ವೈಭವವು ನಿಮ್ಮ ಮನ-ಕಣ್ಣುಗಳಿಗಳಿಗೆ ಹಬ್ಬವಾಗಲಿದೆ. -ಡಾ. ಎಂ. ಮೋಹನ್ ಕುಮಾರ್ ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ

Related posts

ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ನೂತನ ಟ್ರಸ್ಟಿಗಳ ಪದಗ್ರಹಣ

Suddi Udaya

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂ ನ ಗ್ರ್ಯಾಂಡ್ ಫಿನಾಲೆ

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!