25.7 C
ಪುತ್ತೂರು, ಬೆಳ್ತಂಗಡಿ
September 20, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ಅಪ್ರಾಪ್ತ ಮುಸ್ಲಿಂ ಬಾಲಕನ ಅಪಹರಣೆ, ಅಮಾನುಷ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರೇರೇಪಿಸಿದ ಘಟನೆ ಅತ್ಯಂತ ಕ್ರೂರ, ಮಾನವೀಯತೆಯಿಲ್ಲದ ಹಾಗೂ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತದ್ದಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಅಪ್ರಾಪ್ತ ಬಾಲಕನನ್ನು ಧರ್ಮದ ಆಧಾರದ ಮೇಲೆ ಗುರುತಿಸಿ ಹಲ್ಲೆ ನಡೆಸಿರುವುದು ಸಂಘಟಿತ ದ್ವೇಷ ರಾಜಕಾರಣದ ಪ್ರತಿಫಲವಾಗಿದೆ. “ಅನೈತಿಕ ಪೊಲೀಸ್ ಗಿರಿ” ಎಂಬ ಹೆಸರಿನಲ್ಲಿ ಕೆಲ ಸಂಘಪರಿವಾರದ ಕಾರ್ಯಕರ್ತರು ಕಾನೂನನ್ನು ಕೈಗೆತ್ತಿಕೊಂಡು ನಿರಪರಾಧ ಯುವಕರ ಮೇಲೆ ದೌರ್ಜನ್ಯ ಎಸಗುತ್ತಿರುವುದು ಅತ್ಯಂತ ಖಂಡನೀಯ ಎಂದು ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಗುಂಪಾಗಿ ಹಲ್ಲೆ ನಡೆಸಿರುವುದು ಹಾಗೂ ಬಳಿಕ ಜೀವಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿರುವುದು ಗಂಭೀರ ಅಪರಾಧವಾಗಿದ್ದು, ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ.
ಈ ಹಿನ್ನೆಲೆಯಲ್ಲಿ ಆರೋಪಿಗಳು ಸೇರಿದಂತೆ ಸಂಬಂಧಪಟ್ಟ ಎಲ್ಲರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್.ಡಿ.ಪಿ.ಐ ಆಗ್ರಹಿಸುತ್ತದೆ.

ಸಂತ್ರಸ್ತ ಬಾಲಕನಿಗೆ ನ್ಯಾಯ ದೊರಕುವವರೆಗೆ ಹೋರಾಟ ನಡೆಸುವುದಾಗಿ ನವಾಝ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಬಂದಾರು ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!