May 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ಅಪ್ರಾಪ್ತ ಮುಸ್ಲಿಂ ಬಾಲಕನ ಅಪಹರಣೆ, ಅಮಾನುಷ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರೇರೇಪಿಸಿದ ಘಟನೆ ಅತ್ಯಂತ ಕ್ರೂರ, ಮಾನವೀಯತೆಯಿಲ್ಲದ ಹಾಗೂ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತದ್ದಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಅಪ್ರಾಪ್ತ ಬಾಲಕನನ್ನು ಧರ್ಮದ ಆಧಾರದ ಮೇಲೆ ಗುರುತಿಸಿ ಹಲ್ಲೆ ನಡೆಸಿರುವುದು ಸಂಘಟಿತ ದ್ವೇಷ ರಾಜಕಾರಣದ ಪ್ರತಿಫಲವಾಗಿದೆ. “ಅನೈತಿಕ ಪೊಲೀಸ್ ಗಿರಿ” ಎಂಬ ಹೆಸರಿನಲ್ಲಿ ಕೆಲ ಸಂಘಪರಿವಾರದ ಕಾರ್ಯಕರ್ತರು ಕಾನೂನನ್ನು ಕೈಗೆತ್ತಿಕೊಂಡು ನಿರಪರಾಧ ಯುವಕರ ಮೇಲೆ ದೌರ್ಜನ್ಯ ಎಸಗುತ್ತಿರುವುದು ಅತ್ಯಂತ ಖಂಡನೀಯ ಎಂದು ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಗುಂಪಾಗಿ ಹಲ್ಲೆ ನಡೆಸಿರುವುದು ಹಾಗೂ ಬಳಿಕ ಜೀವಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿರುವುದು ಗಂಭೀರ ಅಪರಾಧವಾಗಿದ್ದು, ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ.
ಈ ಹಿನ್ನೆಲೆಯಲ್ಲಿ ಆರೋಪಿಗಳು ಸೇರಿದಂತೆ ಸಂಬಂಧಪಟ್ಟ ಎಲ್ಲರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್.ಡಿ.ಪಿ.ಐ ಆಗ್ರಹಿಸುತ್ತದೆ.

ಸಂತ್ರಸ್ತ ಬಾಲಕನಿಗೆ ನ್ಯಾಯ ದೊರಕುವವರೆಗೆ ಹೋರಾಟ ನಡೆಸುವುದಾಗಿ ನವಾಝ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya
error: Content is protected !!