May 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

ಬೆಳ್ತಂಗಡಿ : ತನ್ನ ಶಾಲಾ ಸ್ನೇಹಿತರೊಂದಿಗೆ ಜಾತ್ರೆಗೆ ಬಂದಿದ್ದ ಅನ್ಯ ಧರ್ಮದ ಅಪ್ರಾಪ್ತ ಬಾಲಕನಿಗೆ (17ವ) ಜಾತ್ರಾ ಸ್ಥಳದಲ್ಲಿದ್ದ ಕೆಲವರು, ತಮ್ಮ ಧರ್ಮದ ಬಾಲಕಿಯರೊಂದಿಗೆ ಅನ್ಯ ಧರ್ಮದ ಬಾಲಕನು ಜಾತ್ರೆಗೆ ಬಂದಿರುವುದಾಗಿ ಅಕ್ಷೇಪಿಸಿ, ಬಾಲಕನಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವುದಾಗಿ ಬಾಲಕನ ತಂದೆ ಘಟನೆ ನಡೆದು ಏಳು ದಿನಗಳ ಬಳಿಕ ಮಾ.18ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಾಲಕ ಮಾ.11 ರಂದು ಉಜಿರೆ ಜಾತ್ರೆಗೆ ಬಂದಿದ್ದು, ರಾತ್ರಿ 10.30 ರ ಸುಮಾರಿಗೆ ಜಾತ್ರೆಯಲ್ಲಿ ಜಾಯಿಂಟ್ ವೀಲ್‌ನ ಹತ್ತಿರ ಸಹಪಾಠಿ ವಿದ್ಯಾರ್ಥಿನಿಯರು ಮೊಬೈಲ್‌ನ್ನು ಆತನಲ್ಲಿ ಕೊಟ್ಟು ಅವರು ಆಟ ಆಡಲು ಹೋದಾಗ, ಅವರ ಬರುವಿಕೆಯನ್ನು ಕಾಯುತ್ತಿರುವ ಸಂದರ್ಭ ಅಲ್ಲಿಗೆ ಬಂದ ಕೆಲವರು ನಮ್ಮ ಧರ್ಮದ ಹುಡುಗಿಯರೊಂದಿಗೆ ಅನ್ಯ ಧರ್ಮದ ಬಾಲಕನು ಜಾತ್ರೆಗೆ ಬಂದಿರುವುದಾಗಿ ಅಕ್ಷೇಪಿಸಿ, ಬಾಲಕನಿಗೆ ಹಲ್ಲೆ ನಡೆಸಿ ನಿಂದಿಸಿರುತ್ತಾರೆ ಹಾಗೂ ಸದ್ರಿ ಬಾಲಕನನ್ನು ಅಲ್ಲಿಂದ ಬೈಕಿನಲ್ಲಿ ದೂರ ಕರೆತಂದು ಹಲ್ಲೆ ನಡೆಸಿ, ಬಾಲಕನಿಂದ ತಾನೇ ಜಾತ್ರಾ ಸ್ಥಳದಲ್ಲಿ ತಪ್ಪು ಮಾಡಿರುವುದಾಗಿ ವಿಡಿಯೋ ಹೇಳಿಕೆ ದಾಖಲಿಸಿಕೊಂಡು ಆತನನ್ನು ಕಳುಹಿಸಿರುತ್ತಾರೆ.

ಈ ಘಟನೆಯಿಂದ ಬಾಲಕನು ಕೆಲದಿನಗಳಿಂದ ಭಯಭೀತನಾಗಿದ್ದಾನೆ ಎಂಬುದಾಗಿ ಬಾಲಕನ ತಂದೆ ಮಾ.18 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 30/2026, ಕಲಂ: 137(2), 115(2), 351(2) , 352, 352(2) ಜೊತೆಗೆ 190 ಬಿಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!