34.2 C
ಪುತ್ತೂರು, ಬೆಳ್ತಂಗಡಿ
March 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮಾಜಿ ಅಧ್ಯಕ್ಷ ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯ ಸ್ಮರಣೆಯನ್ನು ಇತ್ತೀಚೆಗೆ ದಯಾ ವಿಶೇಷಾ ಚೇತನರ ಶಾಲೆ ಹಾಗೂ ಅನುಗ್ರಹ ವೃದ್ಧಾಶ್ರಮ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು.

ದಿ. ಎನ್ ಪದ್ಮನಾಭ ಮಾಣಿಂಜ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಸೇವೆ ಹಾಗೂ ಸಮಾಜದ ಮೇಲಿನ ಕೊಡುಗಗಳನ್ನು ಸ್ಮರಿಸಲಾಯಿತು.

ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು ಸಹಬೋಜನ ನಡೆಸಲಾಯಿತು.

ಸಂಘದ ಅಧ್ಯಕ್ಷ ಭಗೀರಥ ಜಿ, ಮಾತನಾಡಿ ನಮ್ಮನ್ನು ಅಗಲಿದ ದಿವ್ಯ ಚೇತನ ಪದ್ಮನಾಭ ಮಾಣಿಂಜರವರ ಸೇವಾ ಕಾರ್ಯಗಳ ಬಗ್ಗೆ ಸ್ಮರಿಸಿದರು. ಗೌರವಾನ್ವಿತರ ಮೊದಲ ವರ್ಷದ ಪುಣ್ಯಸ್ಮರಣೆಯನ್ನು ದೇವರ ಮಕ್ಕಳೊಂದಿಗೆ ಆಚರಿಸಿರುವುದು ನಿಜಕ್ಕೂ ಖುಷಿಯನ್ನು ನೀಡಿದೆ ಇಲ್ಲಿನ ವ್ಯವಸ್ಥೆ ಹಾಗೂ ಶಿಕ್ಷಕರ ಕಾರ್ಯವೈಖರಿಯ ಬಗ್ಗೆ ಪ್ರಶಂಸೆಯ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ನಿರ್ದೇಶಕರಾದ ಚಂದ್ರಶೇಖರ, ಜಯವಿಕ್ರಮ ಕಲ್ಲಾಪು, ದಯಾ ವಿಶೇಷ ಶಾಲೆಯ ಪಾ. ವಿನೋದ್, ಸಮಗದ ವಿಶೇಷಾಧಿಕಾರಿ ಯಂ ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ ಕುಮಾರ್, ಕೇಂದ್ರ ಕಚೇರಿ ಅಧಿಕಾರಿ ವರ್ಗ, ಶಾಖಾ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆಯ ಎಸ್. ಡಿ. ಎಂ. ಡಿ. ಎಡ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!