28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮಾಜಿ ಅಧ್ಯಕ್ಷ ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯ ಸ್ಮರಣೆಯನ್ನು ಇತ್ತೀಚೆಗೆ ದಯಾ ವಿಶೇಷಾ ಚೇತನರ ಶಾಲೆ ಹಾಗೂ ಅನುಗ್ರಹ ವೃದ್ಧಾಶ್ರಮ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು.

ದಿ. ಎನ್ ಪದ್ಮನಾಭ ಮಾಣಿಂಜ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಸೇವೆ ಹಾಗೂ ಸಮಾಜದ ಮೇಲಿನ ಕೊಡುಗಗಳನ್ನು ಸ್ಮರಿಸಲಾಯಿತು.

ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು ಸಹಬೋಜನ ನಡೆಸಲಾಯಿತು.

ಸಂಘದ ಅಧ್ಯಕ್ಷ ಭಗೀರಥ ಜಿ, ಮಾತನಾಡಿ ನಮ್ಮನ್ನು ಅಗಲಿದ ದಿವ್ಯ ಚೇತನ ಪದ್ಮನಾಭ ಮಾಣಿಂಜರವರ ಸೇವಾ ಕಾರ್ಯಗಳ ಬಗ್ಗೆ ಸ್ಮರಿಸಿದರು. ಗೌರವಾನ್ವಿತರ ಮೊದಲ ವರ್ಷದ ಪುಣ್ಯಸ್ಮರಣೆಯನ್ನು ದೇವರ ಮಕ್ಕಳೊಂದಿಗೆ ಆಚರಿಸಿರುವುದು ನಿಜಕ್ಕೂ ಖುಷಿಯನ್ನು ನೀಡಿದೆ ಇಲ್ಲಿನ ವ್ಯವಸ್ಥೆ ಹಾಗೂ ಶಿಕ್ಷಕರ ಕಾರ್ಯವೈಖರಿಯ ಬಗ್ಗೆ ಪ್ರಶಂಸೆಯ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ನಿರ್ದೇಶಕರಾದ ಚಂದ್ರಶೇಖರ, ಜಯವಿಕ್ರಮ ಕಲ್ಲಾಪು, ದಯಾ ವಿಶೇಷ ಶಾಲೆಯ ಪಾ. ವಿನೋದ್, ಸಮಗದ ವಿಶೇಷಾಧಿಕಾರಿ ಯಂ ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ ಕುಮಾರ್, ಕೇಂದ್ರ ಕಚೇರಿ ಅಧಿಕಾರಿ ವರ್ಗ, ಶಾಖಾ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಜಯನಗರ-ಗುರಿಪಳ್ಳದಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ : ಡಾ| ಗೋಪಾಲ ಕೃಷ್ಣ ಕೆ.

Suddi Udaya

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya
error: Content is protected !!