26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮಾಜಿ ಅಧ್ಯಕ್ಷ ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯ ಸ್ಮರಣೆಯನ್ನು ಇತ್ತೀಚೆಗೆ ದಯಾ ವಿಶೇಷಾ ಚೇತನರ ಶಾಲೆ ಹಾಗೂ ಅನುಗ್ರಹ ವೃದ್ಧಾಶ್ರಮ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು.

ದಿ. ಎನ್ ಪದ್ಮನಾಭ ಮಾಣಿಂಜ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಸೇವೆ ಹಾಗೂ ಸಮಾಜದ ಮೇಲಿನ ಕೊಡುಗಗಳನ್ನು ಸ್ಮರಿಸಲಾಯಿತು.

ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು ಸಹಬೋಜನ ನಡೆಸಲಾಯಿತು.

ಸಂಘದ ಅಧ್ಯಕ್ಷ ಭಗೀರಥ ಜಿ, ಮಾತನಾಡಿ ನಮ್ಮನ್ನು ಅಗಲಿದ ದಿವ್ಯ ಚೇತನ ಪದ್ಮನಾಭ ಮಾಣಿಂಜರವರ ಸೇವಾ ಕಾರ್ಯಗಳ ಬಗ್ಗೆ ಸ್ಮರಿಸಿದರು. ಗೌರವಾನ್ವಿತರ ಮೊದಲ ವರ್ಷದ ಪುಣ್ಯಸ್ಮರಣೆಯನ್ನು ದೇವರ ಮಕ್ಕಳೊಂದಿಗೆ ಆಚರಿಸಿರುವುದು ನಿಜಕ್ಕೂ ಖುಷಿಯನ್ನು ನೀಡಿದೆ ಇಲ್ಲಿನ ವ್ಯವಸ್ಥೆ ಹಾಗೂ ಶಿಕ್ಷಕರ ಕಾರ್ಯವೈಖರಿಯ ಬಗ್ಗೆ ಪ್ರಶಂಸೆಯ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ನಿರ್ದೇಶಕರಾದ ಚಂದ್ರಶೇಖರ, ಜಯವಿಕ್ರಮ ಕಲ್ಲಾಪು, ದಯಾ ವಿಶೇಷ ಶಾಲೆಯ ಪಾ. ವಿನೋದ್, ಸಮಗದ ವಿಶೇಷಾಧಿಕಾರಿ ಯಂ ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ ಕುಮಾರ್, ಕೇಂದ್ರ ಕಚೇರಿ ಅಧಿಕಾರಿ ವರ್ಗ, ಶಾಖಾ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಸೆ.14-18: ಬೆಳ್ತಂಗಡಿಯಲ್ಲಿ 65ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!