March 20, 2026
ವರದಿಶಿಕ್ಷಣ ಸಂಸ್ಥೆ

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ 3 ತಿಂಗಳ ಟ್ಯೂಷನ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ಅಧ್ಯಕ್ಷತೆಯನ್ನು ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ ವಹಿಸಿ ಶಾಲೆ ಎಸ್.ಡಿ.ಎಂ.ಸಿ ಗೌರವ ಸದಸ್ಯ ಉದಯ ಹೆಗ್ಡೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಾರಾವಿ ವಲಯದ ವಲಯಾಧ್ಯಕ್ಷ ಶೇಖರ್ ಹೆಗ್ಡೆ, ನಾರಾವಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಶೀಲ, ಶಾಲಾ ನಾಯಕ ಪ್ರತೀಕ್, ಶಾಲಾ ಸಹ ಶಿಕ್ಷಕರು, ಸೇವಪ್ರತಿನಿಧಿಗಳಾದ ರೇಷ್ಮಾ, ಹರಿಣಾಕ್ಷಿ ಉಪಸ್ಥಿತರಿದ್ದರು.

ಟ್ಯೂಷನ್ ಕ್ಲಾಸ್ ತರಬೇತಿಯಲ್ಲಿ ಉತ್ತಮ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಗುರುತಿಸಲಾಯಿತು. ಎಸ್ಎಸ್ಎಲ್ಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪೆನ್ ನೀಡಿ ಪಬ್ಲಿಕ್ ಪರೀಕ್ಷೆಗೆ ಶುಭ ಹಾರೈಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಾರಾವಿ ಕಾರ್ಯಕ್ಷೇತ್ರದ ಕ್ಯಾನ್ಸರ್ ಅನಾರೋಗ್ಯ ಸದಸ್ಯರಾದ ಲಲಿತ ಹೆಗ್ಡೆ ಇವರಿಗೆ ಶ್ರೀ.ಕ್ಷೇತ್ರದಿಂದ ಪೂಜ್ಯರು ಮಂಜೂರು ಮಾಡಿದ 25000 ಸಹಾಯಧನ ಕ್ರಿಟಿಕಲ್ ಫಂಡ್ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ತಾಲೂಕು ಸಮನ್ವಯಾಧಿಕಾರಿ ಸುಗುಣ ಸ್ವಾಗತಿಸಿ, ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ ನಿರೂಪಿದರು. ಶಿಕ್ಷಕಿ ಆಶಾಲತಾ ವಂದಿಸಿದರು.

Related posts

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya
error: Content is protected !!