26.5 C
ಪುತ್ತೂರು, ಬೆಳ್ತಂಗಡಿ
September 20, 2026
ವರದಿಶಿಕ್ಷಣ ಸಂಸ್ಥೆ

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ 3 ತಿಂಗಳ ಟ್ಯೂಷನ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ಅಧ್ಯಕ್ಷತೆಯನ್ನು ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ ವಹಿಸಿ ಶಾಲೆ ಎಸ್.ಡಿ.ಎಂ.ಸಿ ಗೌರವ ಸದಸ್ಯ ಉದಯ ಹೆಗ್ಡೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಾರಾವಿ ವಲಯದ ವಲಯಾಧ್ಯಕ್ಷ ಶೇಖರ್ ಹೆಗ್ಡೆ, ನಾರಾವಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಶೀಲ, ಶಾಲಾ ನಾಯಕ ಪ್ರತೀಕ್, ಶಾಲಾ ಸಹ ಶಿಕ್ಷಕರು, ಸೇವಪ್ರತಿನಿಧಿಗಳಾದ ರೇಷ್ಮಾ, ಹರಿಣಾಕ್ಷಿ ಉಪಸ್ಥಿತರಿದ್ದರು.

ಟ್ಯೂಷನ್ ಕ್ಲಾಸ್ ತರಬೇತಿಯಲ್ಲಿ ಉತ್ತಮ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಗುರುತಿಸಲಾಯಿತು. ಎಸ್ಎಸ್ಎಲ್ಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪೆನ್ ನೀಡಿ ಪಬ್ಲಿಕ್ ಪರೀಕ್ಷೆಗೆ ಶುಭ ಹಾರೈಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಾರಾವಿ ಕಾರ್ಯಕ್ಷೇತ್ರದ ಕ್ಯಾನ್ಸರ್ ಅನಾರೋಗ್ಯ ಸದಸ್ಯರಾದ ಲಲಿತ ಹೆಗ್ಡೆ ಇವರಿಗೆ ಶ್ರೀ.ಕ್ಷೇತ್ರದಿಂದ ಪೂಜ್ಯರು ಮಂಜೂರು ಮಾಡಿದ 25000 ಸಹಾಯಧನ ಕ್ರಿಟಿಕಲ್ ಫಂಡ್ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ತಾಲೂಕು ಸಮನ್ವಯಾಧಿಕಾರಿ ಸುಗುಣ ಸ್ವಾಗತಿಸಿ, ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ ನಿರೂಪಿದರು. ಶಿಕ್ಷಕಿ ಆಶಾಲತಾ ವಂದಿಸಿದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya
error: Content is protected !!