25.7 C
ಪುತ್ತೂರು, ಬೆಳ್ತಂಗಡಿ
September 20, 2026
ಚಿತ್ರ ವರದಿಧಾರ್ಮಿಕವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನಾಚರಣೆ

ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವತಿಯಿಂದ ಮಾ. 19ರಂದು ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ವಿಶೇಷವಾಗಿ ಬಲಿಪೂಜೆಯಲ್ಲಿ ಭಾಗವಹಿಸುವ ಅವಕಾಶವನ್ನು ಕಲ್ಪಿಸಲಾಗಿದ್ದು, ಬಳಿಕ ಅವರಿಗೆ ಸನ್ಮಾನ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಅವು ಹಿರಿಯರನ್ನು ಸಂತೋಷಪಡಿಸಿತು. ನೆಲ್ಯಾಡಿ ಹಾಗೂ ಆರ್ಲ ಸೆಂಟ್ ಮೇರೀಸ್ ಚರ್ಚ್‌ನ ಸುಮಾರು ಐವತ್ತಕ್ಕೂ ಹೆಚ್ಚು ಹಿರಿಯ ನಾಗರಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅದನ್ನು ಯಶಸ್ವಿಗೊಳಿಸಿದರು.

ಪುಣ್ಯಕ್ಷೇತ್ರದ ಧರ್ಮಗುರು ರೆವ. ಫಾ. ಶಾಜಿ ಮಾತ್ಯು ಮಾತನಾಡಿ, “ಹಿರಿಯ ನಾಗರಿಕರ ಆರೈಕೆ ಸಮಾಜದ ಪ್ರಥಮ ಕರ್ತವ್ಯವಾಗಿದ್ದು, ಅವರ ಅನುಭವ ಮತ್ತು ಆಶೀರ್ವಾದಗಳು ನಮ್ಮ ಸಮಾಜದ ಅಮೂಲ್ಯ ಸಂಪತ್ತು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತೃಸಂಘದ ಸಿಸ್ಟರ್ ಲಿಸ್ ಮಾತ್ಯು, ಸಿಸ್ಟರ್ ತೆರೇಸಾ ಕುರ್ಯನ್, ಸುಜಾ ಜೇಮ್ಸ್, ಲಿಸಿ, ರಿಯಾ,ಸ್ಮಿತಾ, ಅನುಷಾ, ಮಿನಿ, ಸುಜಿತಾ, ಸೆನ್ಸಿ, ಸೀಮಾ ಹಾಗೂ ಪ್ರಾಂತ್ಯದ ಟ್ರೆಷರರ್ ಸಿಮಿ ಸೇರಿದಂತೆ ಹಲವರು ನೇತೃತ್ವ ನೀಡಿ ಸಹಕರಿಸಿದರು.

Related posts

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya
error: Content is protected !!