25.1 C
ಪುತ್ತೂರು, ಬೆಳ್ತಂಗಡಿ
August 5, 2026
ಚಿತ್ರ ವರದಿಧಾರ್ಮಿಕವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನಾಚರಣೆ

ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವತಿಯಿಂದ ಮಾ. 19ರಂದು ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ವಿಶೇಷವಾಗಿ ಬಲಿಪೂಜೆಯಲ್ಲಿ ಭಾಗವಹಿಸುವ ಅವಕಾಶವನ್ನು ಕಲ್ಪಿಸಲಾಗಿದ್ದು, ಬಳಿಕ ಅವರಿಗೆ ಸನ್ಮಾನ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಅವು ಹಿರಿಯರನ್ನು ಸಂತೋಷಪಡಿಸಿತು. ನೆಲ್ಯಾಡಿ ಹಾಗೂ ಆರ್ಲ ಸೆಂಟ್ ಮೇರೀಸ್ ಚರ್ಚ್‌ನ ಸುಮಾರು ಐವತ್ತಕ್ಕೂ ಹೆಚ್ಚು ಹಿರಿಯ ನಾಗರಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅದನ್ನು ಯಶಸ್ವಿಗೊಳಿಸಿದರು.

ಪುಣ್ಯಕ್ಷೇತ್ರದ ಧರ್ಮಗುರು ರೆವ. ಫಾ. ಶಾಜಿ ಮಾತ್ಯು ಮಾತನಾಡಿ, “ಹಿರಿಯ ನಾಗರಿಕರ ಆರೈಕೆ ಸಮಾಜದ ಪ್ರಥಮ ಕರ್ತವ್ಯವಾಗಿದ್ದು, ಅವರ ಅನುಭವ ಮತ್ತು ಆಶೀರ್ವಾದಗಳು ನಮ್ಮ ಸಮಾಜದ ಅಮೂಲ್ಯ ಸಂಪತ್ತು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತೃಸಂಘದ ಸಿಸ್ಟರ್ ಲಿಸ್ ಮಾತ್ಯು, ಸಿಸ್ಟರ್ ತೆರೇಸಾ ಕುರ್ಯನ್, ಸುಜಾ ಜೇಮ್ಸ್, ಲಿಸಿ, ರಿಯಾ,ಸ್ಮಿತಾ, ಅನುಷಾ, ಮಿನಿ, ಸುಜಿತಾ, ಸೆನ್ಸಿ, ಸೀಮಾ ಹಾಗೂ ಪ್ರಾಂತ್ಯದ ಟ್ರೆಷರರ್ ಸಿಮಿ ಸೇರಿದಂತೆ ಹಲವರು ನೇತೃತ್ವ ನೀಡಿ ಸಹಕರಿಸಿದರು.

Related posts

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಕಿಲ್ಲೂರು  ಸ.ಉ.ಪ್ರಾ. ಶಾಲೆಯಲ್ಲಿ  ಯೋಗ ದಿನಾಚರಣೆ 

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಆ.17: ನಾಲ್ಕೂರಿನಲ್ಲಿ 3ನೇ ವರ್ಷದ ಮೊಸರು ಕುಡಿಕೆ ಉತ್ಸವ, ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!