27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

ಬೆಳ್ತಂಗಡಿ; ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಮುಂಡಾಜೆಯಲ್ಲಿ ಸಂಭ್ರಮದ ಈದುಲ್ ಫಿತರ್ ಹಬ್ಬ ಆಚರಿಸಲಾಯಿತು.

ಖುತುಬಾ ಪಾರಾಯಣ ಮತ್ತು ಪೆರ್ನಾಲ್ ನಮಾಝ್ ಗೆ ನೇತೃತ್ವವನ್ನು ಖತೀಬ್ ಉಸ್ತಾದ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ವಹಿಸಿದ್ದರು. ಸದರ್ ಉಸ್ತಾದ್ ತ್ವಾಹಿರ್ ಸ‌ಅದಿ ನಾವೂರು ಸಹಕಾರ ನೀಡಿದರು.

ಕಳೆದ 6 ತಿಂಗಳಿನಿಂದ ಕ್ರಮವಾಗಿ ಬೆಳಗ್ಗೆ ಮತ್ತು ಇಶಾಅ್ ನಮಾಝ್ ಗೆ ಆಗಮಿಸಿದ 9ನೇ ತರಗತಿ ವಿದ್ಯಾರ್ಥಿಗಳಾದ ಅಮಾನ್ ಮತ್ತು ಮುಹಮ್ಮದ್ ಶಾಝಿನ್ ಅವರಿಗೆ ವಿಶೇಷ ನಗದು ಪುರಸ್ಕಾರ ನೀಡಲಾಯಿತು.

ಎಲ್ಲಾ ದಿವಸಗಳಲ್ಲಿ ತರಾವೀಹ್ ನಮಾಝ್ ಗೆ ಆಗಮಿಸಿದ ಜಮಾಅತ್ ‌ನ ಹಿರಿಯರಾದ ಹಾಜಬ್ಬ ಸಿ, ಬಾವಾಕ ಬೆಳಾಲ್ ಮತ್ತು ಉಮರಬ್ಬ ಕನ್ಯಾಡಿ ಅವರನ್ನು ಶಾಲು ಹೊದಿಸಿ ನಗದಿನೊಂದಿಗೆ ಪುರಸ್ಕರಿಸಲಾಯಿತು. ಮದರಸ ವಿದ್ಯಾರ್ಥಿ ಮುಹಮ್ಮದ್ ಶುಜಾಹ್ ಅವರನ್ನೂ ನಗದಿನೊಂದಿಗೆ ಗುರುತಿಸಲಾಯಿತು.

ನಗದು ಬಹುಮಾನಗಳನ್ನು ಜಮಾಅತ್ ಅಧ್ಯಕ್ಷ, ಯುವ ಉದ್ಯಮಿ ಅಬ್ದುಲ್ ಬಶೀರ್ ನೆಕ್ಕರೆ ಪ್ರಾಯೋಜಿಸಿದರು.
ಕಾರ್ಯಕ್ರಮ ದಲ್ಲಿ ಕೆ.ಯು ಮುಹಮ್ಮದ್ ಸಖಾಫಿ, ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್, ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಶುಭ ಕೋರಿದರು.

ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್ ಸಹಿತ ಜಮಾಅತ್ ಬಾಂಧವರು, ಕಮಿಟಿ‌ ಪದಾಧಿಕಾರಿಗಳು, ಎಸ್ ಬಿ ಎಸ್, ಎಸ್ ವೈ ಎಸ್ , ಎಸ್ಸೆಸ್ಸೆಫ್, ಕೆಎಂಜೆ ಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ಮೇ 25: ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಗ್ರಾಮ ಸೀಮಿತ ಆಟಗಾರರ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ ಹೃದಯಾಘಾತದಿಂದ ನಿಧನ: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ ದೊರೆಯದ ಸೌಲಭ್ಯ: ಸಾರ್ವಜನಿಕರ ಆಕ್ರೋಶ

Suddi Udaya
error: Content is protected !!