22.4 C
ಪುತ್ತೂರು, ಬೆಳ್ತಂಗಡಿ
March 20, 2026
ತಾಲೂಕು ಸುದ್ದಿವರದಿ

ಇಂದು(ಮಾ.20): ಈದುಲ್ ಫಿತರ್ ಹಬ್ಬದ ಆಚರಣೆ: ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

ಬೆಳ್ತಂಗಡಿ: ಕರಾವಳಿ ಜಿಲ್ಲೆಗಳ ಮುಸ್ಲಿಂ ಬಾಂಧವರು ಕಳೆದ ಒಂದು ತಿಂಗಳಿನಿಂದ ಶ್ರದ್ಧಾ, ಭಕ್ತಿಯಿಂದ ಆಚರಿಸುತ್ತಿದ್ದ ಪವಿತ್ರ ರಂಜಾನ್ ಉಪವಾಸ ವ್ರತಕ್ಕೆ ಗುರುವಾರ ತೆರೆ ಬಿದ್ದಿದ್ದು, ಶುಕ್ರವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಅತ್ಯಂತ ಸಡಗರ-ಸಂಭ್ರಮದಿಂದ ‘ಈದುಲ್ ಫಿತ್’ ಹಬ್ಬವನ್ನು ಆಚರಿಸಲಾಗುತ್ತದೆ. ಮಾ . 19ರಂದು ಸಂಜೆ ಆಕಾಶದಲ್ಲಿ ಶವ್ವಾಲ್ ತಿಂಗಳ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ, ಮಾ.20(ಶುಕ್ರವಾರ) ಈದ್ ಹಬ್ಬವನ್ನು ಆಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್ ವಿ ದರ್ಶನ್ ಆದೇಶಿಸಿದ್ದಾರೆ.

Related posts

ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya
error: Content is protected !!