25.1 C
ಪುತ್ತೂರು, ಬೆಳ್ತಂಗಡಿ
August 5, 2026
ತಾಲೂಕು ಸುದ್ದಿವರದಿ

ಇಂದು(ಮಾ.20): ಈದುಲ್ ಫಿತರ್ ಹಬ್ಬದ ಆಚರಣೆ: ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

ಬೆಳ್ತಂಗಡಿ: ಕರಾವಳಿ ಜಿಲ್ಲೆಗಳ ಮುಸ್ಲಿಂ ಬಾಂಧವರು ಕಳೆದ ಒಂದು ತಿಂಗಳಿನಿಂದ ಶ್ರದ್ಧಾ, ಭಕ್ತಿಯಿಂದ ಆಚರಿಸುತ್ತಿದ್ದ ಪವಿತ್ರ ರಂಜಾನ್ ಉಪವಾಸ ವ್ರತಕ್ಕೆ ಗುರುವಾರ ತೆರೆ ಬಿದ್ದಿದ್ದು, ಶುಕ್ರವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಅತ್ಯಂತ ಸಡಗರ-ಸಂಭ್ರಮದಿಂದ ‘ಈದುಲ್ ಫಿತ್’ ಹಬ್ಬವನ್ನು ಆಚರಿಸಲಾಗುತ್ತದೆ. ಮಾ . 19ರಂದು ಸಂಜೆ ಆಕಾಶದಲ್ಲಿ ಶವ್ವಾಲ್ ತಿಂಗಳ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ, ಮಾ.20(ಶುಕ್ರವಾರ) ಈದ್ ಹಬ್ಬವನ್ನು ಆಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್ ವಿ ದರ್ಶನ್ ಆದೇಶಿಸಿದ್ದಾರೆ.

Related posts

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya
error: Content is protected !!