24.6 C
ಪುತ್ತೂರು, ಬೆಳ್ತಂಗಡಿ
June 21, 2026
ವರದಿಶಿಕ್ಷಣ ಸಂಸ್ಥೆ

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ 3 ತಿಂಗಳ ಟ್ಯೂಷನ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮ ಅಧ್ಯಕ್ಷತೆಯನ್ನು ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ ವಹಿಸಿ ಶಾಲೆ ಎಸ್.ಡಿ.ಎಂ.ಸಿ ಗೌರವ ಸದಸ್ಯ ಉದಯ ಹೆಗ್ಡೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಾರಾವಿ ವಲಯದ ವಲಯಾಧ್ಯಕ್ಷ ಶೇಖರ್ ಹೆಗ್ಡೆ, ನಾರಾವಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಶೀಲ, ಶಾಲಾ ನಾಯಕ ಪ್ರತೀಕ್, ಶಾಲಾ ಸಹ ಶಿಕ್ಷಕರು, ಸೇವಪ್ರತಿನಿಧಿಗಳಾದ ರೇಷ್ಮಾ, ಹರಿಣಾಕ್ಷಿ ಉಪಸ್ಥಿತರಿದ್ದರು.

ಟ್ಯೂಷನ್ ಕ್ಲಾಸ್ ತರಬೇತಿಯಲ್ಲಿ ಉತ್ತಮ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಗುರುತಿಸಲಾಯಿತು. ಎಸ್ಎಸ್ಎಲ್ಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪೆನ್ ನೀಡಿ ಪಬ್ಲಿಕ್ ಪರೀಕ್ಷೆಗೆ ಶುಭ ಹಾರೈಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಾರಾವಿ ಕಾರ್ಯಕ್ಷೇತ್ರದ ಕ್ಯಾನ್ಸರ್ ಅನಾರೋಗ್ಯ ಸದಸ್ಯರಾದ ಲಲಿತ ಹೆಗ್ಡೆ ಇವರಿಗೆ ಶ್ರೀ.ಕ್ಷೇತ್ರದಿಂದ ಪೂಜ್ಯರು ಮಂಜೂರು ಮಾಡಿದ 25000 ಸಹಾಯಧನ ಕ್ರಿಟಿಕಲ್ ಫಂಡ್ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ತಾಲೂಕು ಸಮನ್ವಯಾಧಿಕಾರಿ ಸುಗುಣ ಸ್ವಾಗತಿಸಿ, ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ ನಿರೂಪಿದರು. ಶಿಕ್ಷಕಿ ಆಶಾಲತಾ ವಂದಿಸಿದರು.

Related posts

ಎಕ್ಸಲೆಂಟ್ ವಾಣಿಜ್ಯ ವಿಭಾಗ – ಮರು ಮೌಲ್ಯಮಾಪನದಲ್ಲಿ 2 ರ‍್ಯಾಂಕ್ ಸೇರ್ಪಡೆ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
error: Content is protected !!