26.5 C
ಪುತ್ತೂರು, ಬೆಳ್ತಂಗಡಿ
September 20, 2026
ಚಿತ್ರ ವರದಿಧಾರ್ಮಿಕವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನಾಚರಣೆ

ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವತಿಯಿಂದ ಮಾ. 19ರಂದು ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ವಿಶೇಷವಾಗಿ ಬಲಿಪೂಜೆಯಲ್ಲಿ ಭಾಗವಹಿಸುವ ಅವಕಾಶವನ್ನು ಕಲ್ಪಿಸಲಾಗಿದ್ದು, ಬಳಿಕ ಅವರಿಗೆ ಸನ್ಮಾನ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಅವು ಹಿರಿಯರನ್ನು ಸಂತೋಷಪಡಿಸಿತು. ನೆಲ್ಯಾಡಿ ಹಾಗೂ ಆರ್ಲ ಸೆಂಟ್ ಮೇರೀಸ್ ಚರ್ಚ್‌ನ ಸುಮಾರು ಐವತ್ತಕ್ಕೂ ಹೆಚ್ಚು ಹಿರಿಯ ನಾಗರಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅದನ್ನು ಯಶಸ್ವಿಗೊಳಿಸಿದರು.

ಪುಣ್ಯಕ್ಷೇತ್ರದ ಧರ್ಮಗುರು ರೆವ. ಫಾ. ಶಾಜಿ ಮಾತ್ಯು ಮಾತನಾಡಿ, “ಹಿರಿಯ ನಾಗರಿಕರ ಆರೈಕೆ ಸಮಾಜದ ಪ್ರಥಮ ಕರ್ತವ್ಯವಾಗಿದ್ದು, ಅವರ ಅನುಭವ ಮತ್ತು ಆಶೀರ್ವಾದಗಳು ನಮ್ಮ ಸಮಾಜದ ಅಮೂಲ್ಯ ಸಂಪತ್ತು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತೃಸಂಘದ ಸಿಸ್ಟರ್ ಲಿಸ್ ಮಾತ್ಯು, ಸಿಸ್ಟರ್ ತೆರೇಸಾ ಕುರ್ಯನ್, ಸುಜಾ ಜೇಮ್ಸ್, ಲಿಸಿ, ರಿಯಾ,ಸ್ಮಿತಾ, ಅನುಷಾ, ಮಿನಿ, ಸುಜಿತಾ, ಸೆನ್ಸಿ, ಸೀಮಾ ಹಾಗೂ ಪ್ರಾಂತ್ಯದ ಟ್ರೆಷರರ್ ಸಿಮಿ ಸೇರಿದಂತೆ ಹಲವರು ನೇತೃತ್ವ ನೀಡಿ ಸಹಕರಿಸಿದರು.

Related posts

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya
error: Content is protected !!