ವೇಣೂರು: ಶ್ರೀ ವಿಶ್ವಕರ್ಮ ಸೇವಾ ಸಂಘ ವೇಣೂರು ಹಾಗೂ ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವೇಣೂರು ಇದರ ಆಶ್ರಯದಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ವೇಣೂರು ಖ೦ಡಿಗದಲ್ಲಿರುವ ಸಂಘದ ಕಟ್ಟಡದಲ್ಲಿ ಜರುಗಲಿರುವುದು.
ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಂಸ ವುಡ್ ಇಂಡಸ್ಟ್ರೀಸ್ ನ ಮಾಲಕ ಬಿ.ಕೆ. ಸತೀಶ್ ಆಚಾರ್ಯ ವಹಿಸಲಿರುವರು.ಮುಖ್ಯ ಅಥಿತಿಗಳಾಗಿ ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರೀಯಲ್ ಕೊ-ಓಪರೇಟಿವ್ ಸೊಸೈಟಿಯ ನಿರ್ದೇಶಕ ಮಂಜುನಾಥ ಆಚಾರ್ಯ ಅಳದಂಗಡಿ, ಶ್ರೀ ಕಾಳಿಕಾ ಡಿಜಿಟಲ್ ಪ್ರಿಂಟ್ಸ್ ನ ಶಾಂತಲಾ ಸೀತಾರಾಮ ಆಚಾರ್ಯ ಭಾಗವಹಿಸಲಿರುವರು. ಬ್ರಹ್ಮಶ್ರೀ ಯನ್. ಕೇಶವ ಪುರೋಹಿತ್ ಮೂಡಬಿದ್ರೆ ಗೌರವ ಉಪಸ್ಥಿತಿ ವಹಿಸಲಿರುವರು.













