27 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಮಡಿಕೇರಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು.

ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಕೊಡ್ಲಿಪೇಟೆಯ ಚಂದ್ರೇಗೌಡ ಕೆ.ಜಿ, ದಯಾನಂದ, ಅಮ್ಮತ್ತಿಯ ಉಷಾ ಪಿ, ಜಾಂಬೂರಿನ ಹಮೀದ್ ಬಿ ಎ, ಕೊಡಗಿನ ನಂದನ್ ಕುಮಾರ್, ರವರಿಗೆ ಮಡಿಕೇರಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ| ಮದನ್ ಮಾದಯ್ಯ, ಕಾರ್ಯದರ್ಶಿ ಲI ಮಧುಕರ್ ಕೆ, ಹಾಗೂ ಸದಸ್ಯರಾದ ಲ| ನವೀನ್ ರವರು ಗಾಲಿಕುರ್ಚಿಯನ್ನು ಹಸ್ತಾಂತರಿಸಿ ಶುಭಹಾರೈಸಿದರು.

ಸೇವಾಭಾರತಿ ಉಪಾಧ್ಯಕ್ಷ ಬಾಲಕೃಷ್ಣ, ದಕ್ಷಿಣ ಕನ್ನಡ ಮತ್ತು ಕೊಡಗು ಕ್ಷೇತ್ರ ಸಂಯೋಜಕ ಕುಸುಮಾಧರ್ ಉಪಸ್ಥಿತರಿದ್ದರು.

Related posts

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ಕುಮಟಾದಲ್ಲಿ ಶ್ರೀ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ:ಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿಯಿಂದ ಹಲವು ಗಣ್ಯರು ಭಾಗಿ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

Suddi Udaya
error: Content is protected !!