36.1 C
ಪುತ್ತೂರು, ಬೆಳ್ತಂಗಡಿ
March 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

ಬೆಳ್ತಂಗಡಿ; ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಮುಂಡಾಜೆಯಲ್ಲಿ ಸಂಭ್ರಮದ ಈದುಲ್ ಫಿತರ್ ಹಬ್ಬ ಆಚರಿಸಲಾಯಿತು.

ಖುತುಬಾ ಪಾರಾಯಣ ಮತ್ತು ಪೆರ್ನಾಲ್ ನಮಾಝ್ ಗೆ ನೇತೃತ್ವವನ್ನು ಖತೀಬ್ ಉಸ್ತಾದ್ ಸಿರಾಜುದ್ದೀನ್ ಸ‌ಅದಿ ಗಡಿಯಾರ್ ವಹಿಸಿದ್ದರು. ಸದರ್ ಉಸ್ತಾದ್ ತ್ವಾಹಿರ್ ಸ‌ಅದಿ ನಾವೂರು ಸಹಕಾರ ನೀಡಿದರು.

ಕಳೆದ 6 ತಿಂಗಳಿನಿಂದ ಕ್ರಮವಾಗಿ ಬೆಳಗ್ಗೆ ಮತ್ತು ಇಶಾಅ್ ನಮಾಝ್ ಗೆ ಆಗಮಿಸಿದ 9ನೇ ತರಗತಿ ವಿದ್ಯಾರ್ಥಿಗಳಾದ ಅಮಾನ್ ಮತ್ತು ಮುಹಮ್ಮದ್ ಶಾಝಿನ್ ಅವರಿಗೆ ವಿಶೇಷ ನಗದು ಪುರಸ್ಕಾರ ನೀಡಲಾಯಿತು.

ಎಲ್ಲಾ ದಿವಸಗಳಲ್ಲಿ ತರಾವೀಹ್ ನಮಾಝ್ ಗೆ ಆಗಮಿಸಿದ ಜಮಾಅತ್ ‌ನ ಹಿರಿಯರಾದ ಹಾಜಬ್ಬ ಸಿ, ಬಾವಾಕ ಬೆಳಾಲ್ ಮತ್ತು ಉಮರಬ್ಬ ಕನ್ಯಾಡಿ ಅವರನ್ನು ಶಾಲು ಹೊದಿಸಿ ನಗದಿನೊಂದಿಗೆ ಪುರಸ್ಕರಿಸಲಾಯಿತು. ಮದರಸ ವಿದ್ಯಾರ್ಥಿ ಮುಹಮ್ಮದ್ ಶುಜಾಹ್ ಅವರನ್ನೂ ನಗದಿನೊಂದಿಗೆ ಗುರುತಿಸಲಾಯಿತು.

ನಗದು ಬಹುಮಾನಗಳನ್ನು ಜಮಾಅತ್ ಅಧ್ಯಕ್ಷ, ಯುವ ಉದ್ಯಮಿ ಅಬ್ದುಲ್ ಬಶೀರ್ ನೆಕ್ಕರೆ ಪ್ರಾಯೋಜಿಸಿದರು.
ಕಾರ್ಯಕ್ರಮ ದಲ್ಲಿ ಕೆ.ಯು ಮುಹಮ್ಮದ್ ಸಖಾಫಿ, ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್, ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಶುಭ ಕೋರಿದರು.

ಸಯ್ಯಿದ್ ಸಿನಾನ್ ಜಮಲುಲ್ಲೈಲಿ ತಂಙಳ್ ಸಹಿತ ಜಮಾಅತ್ ಬಾಂಧವರು, ಕಮಿಟಿ‌ ಪದಾಧಿಕಾರಿಗಳು, ಎಸ್ ಬಿ ಎಸ್, ಎಸ್ ವೈ ಎಸ್ , ಎಸ್ಸೆಸ್ಸೆಫ್, ಕೆಎಂಜೆ ಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya
error: Content is protected !!