September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಇತಿಹಾಸ ಪ್ರಸಿದ್ದ ಬಳಂಜ ದೇವಸ್ಥಾನದ ಭಕ್ತವೃಂದದಿಂದ ಶಾಸಕ ಹರೀಶ್ ಪೂಂಜರವರ ಭೇಟಿ

ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾ ಪರಮೇಶ್ವರಿಯ ಸನ್ನಿದಾನವು ಜೀರ್ಣೋದ್ಧಾರಗೊಂಡು 12 ವರುಷಗಳು ಕಳೆದು ಇದೀಗ ಪುನಃ ಬ್ರಹ್ಮಕಲಶಕ್ಕೆ ಅಣಿಯಾಗುತ್ತಿದೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲೇ ಬ್ರಹ್ಮಕಲಶ ನಡೆಸುವ ಬಗ್ಗೆ ಅಧಿಕೃತ ಆಹ್ವಾನವನ್ನು ಸಲ್ಲಿಸಲು ಬಳಂಜದ ಸಮಸ್ತರು ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಮಾ 21 ರಂದು ಭೇಟಿ ನೀಡಿ ಬ್ರಹ್ಮಕಲಶೋತ್ಸವ ಬಗ್ಗೆ ಚರ್ಚಿಸಿದರು.

ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಕಳೆದ ಬ್ರಹ್ಮಕಲಶೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆದಿದ್ದು,ಕ್ಷೇತ್ರದ ಮುಂದಿನ ಬ್ರಹ್ಮಕಲಶೋತ್ಸವವು ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ನಡೆಯಬೇಕು ಎಂಬ ಮನವಿಯನ್ನು ಬಳಂಜ ಕ್ಷೇತ್ರದ ಭಕ್ತವರ್ಗ ಶಾಸಕರಲ್ಲಿ ವಿನಂತಿಸಿದಾಗ ಶಾಸಕರು ಪೂರ್ಣಪ್ರಮಾಣದಲ್ಲಿ ಒಪ್ಪಿಗೆ ಸೂಚಿಸಿ,ಕ್ಷೇತ್ರದ ಅಭಿವೃದ್ಧಿಗೆ ಪೂರ್ಣ ಪ್ರಮಾಣದ ಸಹಕಾರ ನೀಡುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಬಿ ಶೀತಲ್ ಪಡಿವಾಳ್,ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ರೈ ಬಾರ್ದಡ್ಕ,ಪ್ರಮುಖರಾದ ಜಯ ಸಾಲಿಯಾನ್ ಕೊಂಗುಳ,ಸುರೇಶ್ ಶೆಟ್ಟಿ ಕುರೆಲ್ಯ,ಚಂದ್ರಶೇಖರ ಪಿಕೆ,ರಾಜೇಂದ್ರ ಶೆಟ್ಟಿ ಕುರೆಲ್ಯ,ಸಂತೋಷ್ ಕುಮಾರ್ ಕಾಪಿನಡ್ಕ, ರಮಾನಾಥ ರೈ ಪಂಬಾಜೆ,ಸತೀಶ್ ಶೆಟ್ಟಿ ಕುರೆಲ್ಯ,ಪ್ರಭಾಕರ ಹೆಗ್ಡೆ ಕೋಡಿ,ಸಂತೋಷ್ ಹೆಗ್ಡೆ ತೆಂಕಕಾರಂದೂರು,ಸಂತೋಷ್ ಪಿ ಕೋಟ್ಯಾನ್ ಬಳಂಜ,ಗುರುಪ್ರಸಾದ್ ಹೆಗ್ಡೆ ಬಳಂಜ,ಸತೀಶ್ ದೇವಾಡಿಗ ಬಳಂಜ,ಗಣೇಶ್ ಸುರ್ಯ ಕಾಪಿನಡ್ಕ, ಡೀಕಯ್ಯ ಕುಲಾಲ್ ಬಳಂಜ,ಸನತ್ ಶೆಟ್ಟಿ ನಾಲ್ಕೂರು,ಸುಧೀಶ್ ಪೂಜಾರಿ ಅಂತರ ಮತ್ತು ಬಳಂಜ ನಾಲ್ಕೂರು ತೆಂಕರಾರಂದೂರು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಯಂತ್ರೋಪಕರಣ ಅವಲಂಬಿತ ಕೃಷಿಕನಿಗೆ ತೊಂದರೆ ನೀಡಬೇಡಿ: ಮೋಹನ್ ಗೌಡ ಕಲ್ಮoಜ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ವರ್ಣಿಕ ಎಚ್. ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!