September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಇತಿಹಾಸ ಪ್ರಸಿದ್ದ ಬಳಂಜ ದೇವಸ್ಥಾನದ ಭಕ್ತವೃಂದದಿಂದ ಶಾಸಕ ಹರೀಶ್ ಪೂಂಜರವರ ಭೇಟಿ

ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾ ಪರಮೇಶ್ವರಿಯ ಸನ್ನಿದಾನವು ಜೀರ್ಣೋದ್ಧಾರಗೊಂಡು 12 ವರುಷಗಳು ಕಳೆದು ಇದೀಗ ಪುನಃ ಬ್ರಹ್ಮಕಲಶಕ್ಕೆ ಅಣಿಯಾಗುತ್ತಿದೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲೇ ಬ್ರಹ್ಮಕಲಶ ನಡೆಸುವ ಬಗ್ಗೆ ಅಧಿಕೃತ ಆಹ್ವಾನವನ್ನು ಸಲ್ಲಿಸಲು ಬಳಂಜದ ಸಮಸ್ತರು ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಮಾ 21 ರಂದು ಭೇಟಿ ನೀಡಿ ಬ್ರಹ್ಮಕಲಶೋತ್ಸವ ಬಗ್ಗೆ ಚರ್ಚಿಸಿದರು.

ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಕಳೆದ ಬ್ರಹ್ಮಕಲಶೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆದಿದ್ದು,ಕ್ಷೇತ್ರದ ಮುಂದಿನ ಬ್ರಹ್ಮಕಲಶೋತ್ಸವವು ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ನಡೆಯಬೇಕು ಎಂಬ ಮನವಿಯನ್ನು ಬಳಂಜ ಕ್ಷೇತ್ರದ ಭಕ್ತವರ್ಗ ಶಾಸಕರಲ್ಲಿ ವಿನಂತಿಸಿದಾಗ ಶಾಸಕರು ಪೂರ್ಣಪ್ರಮಾಣದಲ್ಲಿ ಒಪ್ಪಿಗೆ ಸೂಚಿಸಿ,ಕ್ಷೇತ್ರದ ಅಭಿವೃದ್ಧಿಗೆ ಪೂರ್ಣ ಪ್ರಮಾಣದ ಸಹಕಾರ ನೀಡುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಬಿ ಶೀತಲ್ ಪಡಿವಾಳ್,ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ರೈ ಬಾರ್ದಡ್ಕ,ಪ್ರಮುಖರಾದ ಜಯ ಸಾಲಿಯಾನ್ ಕೊಂಗುಳ,ಸುರೇಶ್ ಶೆಟ್ಟಿ ಕುರೆಲ್ಯ,ಚಂದ್ರಶೇಖರ ಪಿಕೆ,ರಾಜೇಂದ್ರ ಶೆಟ್ಟಿ ಕುರೆಲ್ಯ,ಸಂತೋಷ್ ಕುಮಾರ್ ಕಾಪಿನಡ್ಕ, ರಮಾನಾಥ ರೈ ಪಂಬಾಜೆ,ಸತೀಶ್ ಶೆಟ್ಟಿ ಕುರೆಲ್ಯ,ಪ್ರಭಾಕರ ಹೆಗ್ಡೆ ಕೋಡಿ,ಸಂತೋಷ್ ಹೆಗ್ಡೆ ತೆಂಕಕಾರಂದೂರು,ಸಂತೋಷ್ ಪಿ ಕೋಟ್ಯಾನ್ ಬಳಂಜ,ಗುರುಪ್ರಸಾದ್ ಹೆಗ್ಡೆ ಬಳಂಜ,ಸತೀಶ್ ದೇವಾಡಿಗ ಬಳಂಜ,ಗಣೇಶ್ ಸುರ್ಯ ಕಾಪಿನಡ್ಕ, ಡೀಕಯ್ಯ ಕುಲಾಲ್ ಬಳಂಜ,ಸನತ್ ಶೆಟ್ಟಿ ನಾಲ್ಕೂರು,ಸುಧೀಶ್ ಪೂಜಾರಿ ಅಂತರ ಮತ್ತು ಬಳಂಜ ನಾಲ್ಕೂರು ತೆಂಕರಾರಂದೂರು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!