September 6, 2026
ಗ್ರಾಮಾಂತರ ಸುದ್ದಿವರದಿ

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

ವೇಣೂರು: ಭಾರತೀಯ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಭರತನಾಟ್ಯ ಕಲೆ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿಗೆ ಮಾ.19ರಂದು ಚಾಲನೆ ನೀಡಲಾಯಿತು.

ವೇಣೂರು ಜೆ.ಪಿ ಟವರ್ಸ್‌ನಲ್ಲಿ ನಡೆದ ಈ ಕಾರ್ಯಕ್ರಮವು ಗುರುವರ್ಯರ ಆಶೀರ್ವಾದದೊಂದಿಗೆ ಶುಭಾರಂಭಗೊಂಡಿತು. ವಿದುಷಿ ಶಾಲಿನಿ ಆತ್ಮಭೂಷಣ್ ಅವರ ಮಾರ್ಗದರ್ಶನದಲ್ಲಿ ವಿದುಷಿ ನಿಶಾ ಪ್ರಸಾದ್ ಮಾಣೂರು ಇವರ ನೇತೃತ್ವದಲ್ಲಿ ಆರಂಭವಾದ ಈ ತರಗತಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ಭಾರತೀಯ ಸಂಸ್ಕೃತಿಯ ಮೌಲ್ಯಗಳನ್ನು ಬೆಳೆಸುವ ಪ್ರಮುಖ ವೇದಿಕೆಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಕರು, ಭರತನಾಟ್ಯವು ಕೇವಲ ನೃತ್ಯವಲ್ಲದೆ, ಅದು ಭಾವ, ರಾಗ, ತಾಳಗಳ ಸಮನ್ವಯವಾಗಿದ್ದು, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ನೆರವಾಗುತ್ತದೆ ಎಂದು ತಿಳಿಸಿದರು. ಪೋಷಕರು ಮತ್ತು ಕಲಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಉಪಕ್ರಮವನ್ನು ಶ್ಲಾಘಿಸಿದರು.ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಕಲೆಗಳ ತರಗತಿಗಳು ಪ್ರಾರಂಭವಾಗುತ್ತಿರುವುದು ಸಂಸ್ಕೃತಿ ಸಂರಕ್ಷಣೆಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಜೆಪಿ ಟವರ್ ನ ಮಾಲೀಕರಾದ ಜಗದೀಶ್ಚಂದ್ರ ಡಿ.ಕೆ. ಅಭಿಪ್ರಾಯ ವ್ಯಕ್ತಪಡಿಸಿದರು.

ವಿದುಷಿ ನಿಶಾ ಪ್ರಸಾದ್ ಮಾಣೂರು ಇವರ ನೇತೃತ್ವದಲ್ಲಿ ನಿಯತಿ ನೃತ್ಯ ನಿಕೇತನದ ಶಾಖೆಯು ವೇಣೂರಿನಲ್ಲಿ ಉದ್ಘಾಟನೆಗೊಂಡು , ಶಂಕರ್ ಭಟ್ ಇವರ ನಿರೂಪಣೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿಯತಿ ಭಟ್ ಇವರು ಪ್ರಾರ್ಥಿಸಿ ಪ್ರಸಾದ್ ಎಮ್ ಕೆ ಇವರು ಧನ್ಯವಾದವನ್ನು ಸಮರ್ಪಿಸಿದರು. ಪೋಷಕರಾದ ಜಯಂತಿ ಭಟ್ ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Related posts

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

Suddi Udaya
error: Content is protected !!