23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿ

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

ವೇಣೂರು: ಭಾರತೀಯ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಭರತನಾಟ್ಯ ಕಲೆ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿಗೆ ಮಾ.19ರಂದು ಚಾಲನೆ ನೀಡಲಾಯಿತು.

ವೇಣೂರು ಜೆ.ಪಿ ಟವರ್ಸ್‌ನಲ್ಲಿ ನಡೆದ ಈ ಕಾರ್ಯಕ್ರಮವು ಗುರುವರ್ಯರ ಆಶೀರ್ವಾದದೊಂದಿಗೆ ಶುಭಾರಂಭಗೊಂಡಿತು. ವಿದುಷಿ ಶಾಲಿನಿ ಆತ್ಮಭೂಷಣ್ ಅವರ ಮಾರ್ಗದರ್ಶನದಲ್ಲಿ ವಿದುಷಿ ನಿಶಾ ಪ್ರಸಾದ್ ಮಾಣೂರು ಇವರ ನೇತೃತ್ವದಲ್ಲಿ ಆರಂಭವಾದ ಈ ತರಗತಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ಭಾರತೀಯ ಸಂಸ್ಕೃತಿಯ ಮೌಲ್ಯಗಳನ್ನು ಬೆಳೆಸುವ ಪ್ರಮುಖ ವೇದಿಕೆಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಕರು, ಭರತನಾಟ್ಯವು ಕೇವಲ ನೃತ್ಯವಲ್ಲದೆ, ಅದು ಭಾವ, ರಾಗ, ತಾಳಗಳ ಸಮನ್ವಯವಾಗಿದ್ದು, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ನೆರವಾಗುತ್ತದೆ ಎಂದು ತಿಳಿಸಿದರು. ಪೋಷಕರು ಮತ್ತು ಕಲಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಉಪಕ್ರಮವನ್ನು ಶ್ಲಾಘಿಸಿದರು.ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಕಲೆಗಳ ತರಗತಿಗಳು ಪ್ರಾರಂಭವಾಗುತ್ತಿರುವುದು ಸಂಸ್ಕೃತಿ ಸಂರಕ್ಷಣೆಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಜೆಪಿ ಟವರ್ ನ ಮಾಲೀಕರಾದ ಜಗದೀಶ್ಚಂದ್ರ ಡಿ.ಕೆ. ಅಭಿಪ್ರಾಯ ವ್ಯಕ್ತಪಡಿಸಿದರು.

ವಿದುಷಿ ನಿಶಾ ಪ್ರಸಾದ್ ಮಾಣೂರು ಇವರ ನೇತೃತ್ವದಲ್ಲಿ ನಿಯತಿ ನೃತ್ಯ ನಿಕೇತನದ ಶಾಖೆಯು ವೇಣೂರಿನಲ್ಲಿ ಉದ್ಘಾಟನೆಗೊಂಡು , ಶಂಕರ್ ಭಟ್ ಇವರ ನಿರೂಪಣೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿಯತಿ ಭಟ್ ಇವರು ಪ್ರಾರ್ಥಿಸಿ ಪ್ರಸಾದ್ ಎಮ್ ಕೆ ಇವರು ಧನ್ಯವಾದವನ್ನು ಸಮರ್ಪಿಸಿದರು. ಪೋಷಕರಾದ ಜಯಂತಿ ಭಟ್ ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Related posts

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಬರೆಂಗಾಯ ಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya
error: Content is protected !!