July 23, 2026
ಗ್ರಾಮಾಂತರ ಸುದ್ದಿವರದಿ

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

ವೇಣೂರು: ಭಾರತೀಯ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಭರತನಾಟ್ಯ ಕಲೆ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿಗೆ ಮಾ.19ರಂದು ಚಾಲನೆ ನೀಡಲಾಯಿತು.

ವೇಣೂರು ಜೆ.ಪಿ ಟವರ್ಸ್‌ನಲ್ಲಿ ನಡೆದ ಈ ಕಾರ್ಯಕ್ರಮವು ಗುರುವರ್ಯರ ಆಶೀರ್ವಾದದೊಂದಿಗೆ ಶುಭಾರಂಭಗೊಂಡಿತು. ವಿದುಷಿ ಶಾಲಿನಿ ಆತ್ಮಭೂಷಣ್ ಅವರ ಮಾರ್ಗದರ್ಶನದಲ್ಲಿ ವಿದುಷಿ ನಿಶಾ ಪ್ರಸಾದ್ ಮಾಣೂರು ಇವರ ನೇತೃತ್ವದಲ್ಲಿ ಆರಂಭವಾದ ಈ ತರಗತಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ಭಾರತೀಯ ಸಂಸ್ಕೃತಿಯ ಮೌಲ್ಯಗಳನ್ನು ಬೆಳೆಸುವ ಪ್ರಮುಖ ವೇದಿಕೆಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಕರು, ಭರತನಾಟ್ಯವು ಕೇವಲ ನೃತ್ಯವಲ್ಲದೆ, ಅದು ಭಾವ, ರಾಗ, ತಾಳಗಳ ಸಮನ್ವಯವಾಗಿದ್ದು, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ನೆರವಾಗುತ್ತದೆ ಎಂದು ತಿಳಿಸಿದರು. ಪೋಷಕರು ಮತ್ತು ಕಲಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಉಪಕ್ರಮವನ್ನು ಶ್ಲಾಘಿಸಿದರು.ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಕಲೆಗಳ ತರಗತಿಗಳು ಪ್ರಾರಂಭವಾಗುತ್ತಿರುವುದು ಸಂಸ್ಕೃತಿ ಸಂರಕ್ಷಣೆಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಜೆಪಿ ಟವರ್ ನ ಮಾಲೀಕರಾದ ಜಗದೀಶ್ಚಂದ್ರ ಡಿ.ಕೆ. ಅಭಿಪ್ರಾಯ ವ್ಯಕ್ತಪಡಿಸಿದರು.

ವಿದುಷಿ ನಿಶಾ ಪ್ರಸಾದ್ ಮಾಣೂರು ಇವರ ನೇತೃತ್ವದಲ್ಲಿ ನಿಯತಿ ನೃತ್ಯ ನಿಕೇತನದ ಶಾಖೆಯು ವೇಣೂರಿನಲ್ಲಿ ಉದ್ಘಾಟನೆಗೊಂಡು , ಶಂಕರ್ ಭಟ್ ಇವರ ನಿರೂಪಣೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿಯತಿ ಭಟ್ ಇವರು ಪ್ರಾರ್ಥಿಸಿ ಪ್ರಸಾದ್ ಎಮ್ ಕೆ ಇವರು ಧನ್ಯವಾದವನ್ನು ಸಮರ್ಪಿಸಿದರು. ಪೋಷಕರಾದ ಜಯಂತಿ ಭಟ್ ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

Related posts

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya
error: Content is protected !!