24 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಿವೃತ್ತ ಸಾಧಕ ಯೋಧ ಪ್ರಶಸ್ತಿ ಸ್ವೀಕರಿಸಿ ಆಗಮಿಸಿದ ಲ| ಡಾ.ಗೋಪಾಲಕೃಷ್ಣ ಕಾಂಚೋಡು: ಉಜಿರೆಯಲ್ಲಿ ಭವ್ಯವಾದ ಸ್ವಾಗತ – ಅಭಿನಂದನೆ

ಉಜಿರೆ: ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಯವರು ನೀಡುವ “ನಿವೃತ್ತ ಸಾಧಕ ಯೋಧ” ಪ್ರಶಸ್ತಿಗೆ ಭಾಜನರಾದ ಲ| ಡಾ.ಗೋಪಾಲಕೃಷ್ಣ ಕಾಂಚೋಡು ರವರು ಇಂದು ದೆಹಲಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಉಜಿರೆಗೆ ಆಗಮಿಸಿದ ಸಂದರ್ಭದಲ್ಲಿ ಭವ್ಯವಾದ ಸ್ವಾಗತದೊಂದಿಗೆ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಷಾಕಿರಣ್ ಕಾರಂತ್, ಪುಷ್ಪಾವತಿ ಆರ್ ಶೆಟ್ಟಿ, ಉಜಿರೆ ವರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಅರವಿಂದ ಕಾರಂತ್, ಪ್ರಸ್ತುತ ಅಧ್ಯಕ್ಷರಾದ ಪ್ರಸಾದ್ ಬಿಎಸ್, ಉಪಾಧ್ಯಕ್ಷರಾದ ಪ್ರಭಾಕರ ಜೈನ್, ರಮಾನಂದ, ಹಳ್ಳಿಮನೆ ಪ್ರವೀಣ್ ಫೆರ್ನಾಂಡಿಸ್, ವಿಶ್ವನಾಥ್ ಭಂಡಾರಿ, ರೋಟರಿ ಕ್ಲಬ್ ಕಾರ್ಯದರ್ಶಿ ದಯಾಕರ್, ವಾರ್ಡ್ ಅಧ್ಯಕ್ಷ ವಿಶ್ವನಾಥ್ ನಾಯ್ಕ್, ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್, ವರ್ತಕರ ಸಂಘದ ಇತರ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿ ಅಭಿನಂದಿಸಿದರು.

ಭಾರತೀಯ ಸೇನೆಯಲ್ಲಿ ಪೂರ್ಣ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ವಿಶೇಷವಾಗಿ ಸಮಾಜಕ್ಕೆ ಆದರ್ಶಪ್ರಾಯವಾದ ರೀತಿಯಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವವರಿಗೆ ಈ ಪ್ರಶಸ್ತಿ ನೀಡಲಾಗಿದ್ದು, ಡಾ.ಗೋಪಾಲಕೃಷ್ಣ ಕಾಂಚೋಡು ರವರು ದಕ್ಷಿಣ ಭಾರತದಿಂದ ಆಯ್ಕೆಯಾದ ಪ್ರಥಮ ಏಕೈಕ ವ್ಯಕ್ತಿಯಾಗಿರುತ್ತಾರೆ.

Related posts

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya
error: Content is protected !!