22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನಿವೃತ್ತ ಸಾಧಕ ಯೋಧ ಪ್ರಶಸ್ತಿ ಸ್ವೀಕರಿಸಿ ಆಗಮಿಸಿದ ಲ| ಡಾ.ಗೋಪಾಲಕೃಷ್ಣ ಕಾಂಚೋಡು: ಉಜಿರೆಯಲ್ಲಿ ಭವ್ಯವಾದ ಸ್ವಾಗತ – ಅಭಿನಂದನೆ

ಉಜಿರೆ: ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಯವರು ನೀಡುವ “ನಿವೃತ್ತ ಸಾಧಕ ಯೋಧ” ಪ್ರಶಸ್ತಿಗೆ ಭಾಜನರಾದ ಲ| ಡಾ.ಗೋಪಾಲಕೃಷ್ಣ ಕಾಂಚೋಡು ರವರು ಇಂದು ದೆಹಲಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಉಜಿರೆಗೆ ಆಗಮಿಸಿದ ಸಂದರ್ಭದಲ್ಲಿ ಭವ್ಯವಾದ ಸ್ವಾಗತದೊಂದಿಗೆ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಷಾಕಿರಣ್ ಕಾರಂತ್, ಪುಷ್ಪಾವತಿ ಆರ್ ಶೆಟ್ಟಿ, ಉಜಿರೆ ವರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಅರವಿಂದ ಕಾರಂತ್, ಪ್ರಸ್ತುತ ಅಧ್ಯಕ್ಷರಾದ ಪ್ರಸಾದ್ ಬಿಎಸ್, ಉಪಾಧ್ಯಕ್ಷರಾದ ಪ್ರಭಾಕರ ಜೈನ್, ರಮಾನಂದ, ಹಳ್ಳಿಮನೆ ಪ್ರವೀಣ್ ಫೆರ್ನಾಂಡಿಸ್, ವಿಶ್ವನಾಥ್ ಭಂಡಾರಿ, ರೋಟರಿ ಕ್ಲಬ್ ಕಾರ್ಯದರ್ಶಿ ದಯಾಕರ್, ವಾರ್ಡ್ ಅಧ್ಯಕ್ಷ ವಿಶ್ವನಾಥ್ ನಾಯ್ಕ್, ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್, ವರ್ತಕರ ಸಂಘದ ಇತರ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿ ಅಭಿನಂದಿಸಿದರು.

ಭಾರತೀಯ ಸೇನೆಯಲ್ಲಿ ಪೂರ್ಣ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ವಿಶೇಷವಾಗಿ ಸಮಾಜಕ್ಕೆ ಆದರ್ಶಪ್ರಾಯವಾದ ರೀತಿಯಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವವರಿಗೆ ಈ ಪ್ರಶಸ್ತಿ ನೀಡಲಾಗಿದ್ದು, ಡಾ.ಗೋಪಾಲಕೃಷ್ಣ ಕಾಂಚೋಡು ರವರು ದಕ್ಷಿಣ ಭಾರತದಿಂದ ಆಯ್ಕೆಯಾದ ಪ್ರಥಮ ಏಕೈಕ ವ್ಯಕ್ತಿಯಾಗಿರುತ್ತಾರೆ.

Related posts

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!