ಉಜಿರೆ: ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಯವರು ನೀಡುವ “ನಿವೃತ್ತ ಸಾಧಕ ಯೋಧ” ಪ್ರಶಸ್ತಿಗೆ ಭಾಜನರಾದ ಲ| ಡಾ.ಗೋಪಾಲಕೃಷ್ಣ ಕಾಂಚೋಡು ರವರು ಇಂದು ದೆಹಲಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಉಜಿರೆಗೆ ಆಗಮಿಸಿದ ಸಂದರ್ಭದಲ್ಲಿ ಭವ್ಯವಾದ ಸ್ವಾಗತದೊಂದಿಗೆ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಷಾಕಿರಣ್ ಕಾರಂತ್, ಪುಷ್ಪಾವತಿ ಆರ್ ಶೆಟ್ಟಿ, ಉಜಿರೆ ವರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಅರವಿಂದ ಕಾರಂತ್, ಪ್ರಸ್ತುತ ಅಧ್ಯಕ್ಷರಾದ ಪ್ರಸಾದ್ ಬಿಎಸ್, ಉಪಾಧ್ಯಕ್ಷರಾದ ಪ್ರಭಾಕರ ಜೈನ್, ರಮಾನಂದ, ಹಳ್ಳಿಮನೆ ಪ್ರವೀಣ್ ಫೆರ್ನಾಂಡಿಸ್, ವಿಶ್ವನಾಥ್ ಭಂಡಾರಿ, ರೋಟರಿ ಕ್ಲಬ್ ಕಾರ್ಯದರ್ಶಿ ದಯಾಕರ್, ವಾರ್ಡ್ ಅಧ್ಯಕ್ಷ ವಿಶ್ವನಾಥ್ ನಾಯ್ಕ್, ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್, ವರ್ತಕರ ಸಂಘದ ಇತರ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿ ಅಭಿನಂದಿಸಿದರು.
ಭಾರತೀಯ ಸೇನೆಯಲ್ಲಿ ಪೂರ್ಣ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ವಿಶೇಷವಾಗಿ ಸಮಾಜಕ್ಕೆ ಆದರ್ಶಪ್ರಾಯವಾದ ರೀತಿಯಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವವರಿಗೆ ಈ ಪ್ರಶಸ್ತಿ ನೀಡಲಾಗಿದ್ದು, ಡಾ.ಗೋಪಾಲಕೃಷ್ಣ ಕಾಂಚೋಡು ರವರು ದಕ್ಷಿಣ ಭಾರತದಿಂದ ಆಯ್ಕೆಯಾದ ಪ್ರಥಮ ಏಕೈಕ ವ್ಯಕ್ತಿಯಾಗಿರುತ್ತಾರೆ.












