25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

ಉಜಿರೆ: ಗೋವಿಂದ ದಾಸ ಕಾಲೇಜು ಸುರತ್ಕಲ್ ಇಲ್ಲಿ ನಡೆದ ಯಕ್ಷಯಾನ 2026 ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರವು ತರಣಿಸೇನ ಕಾಳಗ ಎಂಬ ಪ್ರಸಂಗವನ್ನು ಪ್ರಸ್ತುತಪಡಿಸಿ ಸಮಗ್ರ ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದಿರುತ್ತಾರೆ. ವೈಯಕ್ತಿಕ ವಿಭಾಗದಲ್ಲಿ ಕಿರೀಟವೇಷ ತೇಜಸ್, ಪುಂಡುವೇಷ ಮಿಥುನ್ ರಾಜ್, ಬಣ್ಣದ ವೇಷ ವಿಭಿನ್, ಪ್ರಥಮ ಮತ್ತು ಸ್ತ್ರೀ ವೇಷ ಅನನ್ಯ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಹಿಮ್ಮೇಳದಲ್ಲಿ ಭಾಗವತರಾಗಿ ಗಿರೀಶ್ ರೈ ಕಕ್ಯೆಪದವು,ಚೆಂಡೆಯಲ್ಲಿ ಆನಂದ ಗುಡಿಗಾರ್ ಕೆರ್ವಾಶೆ, ಮದ್ದಳೆಯಲ್ಲಿ ಶ್ರೇಯಸ್ ಪಾಳಂದೆ ಹಾಗೂ ಯಕ್ಷಗುರು ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನವನ್ನು ನೀಡಿರುತ್ತಾರೆ. ಪಾತ್ರಧಾರಿಗಳಾಗಿ ತೇಜಸ್(ಶ್ರೀರಾಮ), ಸುಮಂತ್(ಲಕ್ಷ್ಮಣ), ಅಮೋಘ ಶಂಕರ(ವಿಭೀಷಣ), ಮನಸ್ವಿ (ಹನುಮಂತ), ಶ್ರದ್ಧಾ(ಸುಗ್ರೀವ), ವಿಭಿನ್(ರಾವಣ), ಶ್ರೀಚರಣ್ (ದೂತ), ಮಿಥುನ್ ರಾಜ್(ತರಣಿಸೇನ), ಅನನ್ಯ(ಸರಮೆ), ರಾಹುಲ್ (ಸುಪಾರ್ಶ್ವಕ), ತೆರೆಯಲ್ಲಿ ಸಹನ, ಸಾಕ್ಷ ಹಾಗೂ ನೇಪಥ್ಯ ಕಲಾವಿದರಾಗಿ ಚಿಂತನ್, ಸ್ವಸ್ತಿಕ್ ಸಹಕರಿಸಿದರು.

Related posts

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya
error: Content is protected !!