23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಯುದ್ದ ಖಂಡಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳ‌ ಪ್ರತಿಭಟನೆ

ಬೆಳ್ತಂಗಡಿ: ಇಡೀ ಜಗತ್ತಿನ‌ ತೈಲ ಉತ್ಪಾದನೆ, ವಿತರಣೆಯ ಸಂಪೂರ್ಣ ಹಿಡಿತ ತನ್ನ ಹಸ್ತ ಬರಲು ಅಮೇರಿಕ ನಡೆಸುವ ಈ ಅಕ್ರಮ ಯುದ್ದಗಳ ತಡೆಯಲು ಭಾರತ ಮುಂದಾಗಬೇಕೆಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ.ಯಾಧವ ಶೆಟ್ಟಿ ಅಗ್ರಹಿಸಿದರು.

ಅವರು ಇಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು , ಎಐಕೆಎಸ್, ಡಿ.ವೈಎಪ್‌.ಐ., ಜೆ.ಎಂ.ಎಸ್, ಡಿ.ಎಚ್.ಎಸ್. ಆದಿವಾಸಿ ಮೊದಲಾದ ಸಂಘಟನೆಗಳು ಅಮೇರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುವ ಯುದ್ದ ಖಂಡಿಸಿ ನಡೆಸಿದ ಪ್ರತಿಭಟನೆಯನ್ನುದ್ದೇಶಿ ಮಾತಾಡುತ್ತಿದ್ದರು.

ಸಿಐಟಿಯು ದ.ಕ. ಜಿಲ್ಲಾಧ್ಯಕ್ಷರಾದ ಬಿ.ಎಂ.ಭಟ್ ಮಾತಾಡುತ್ತಾ ಒಂದು ದೇಶ ಮತ್ತೊಂದು ದೇಶದ ಸಾರ್ವಭೌಮತೆಯ ಮೇಲೆ‌ ದಾಳಿ ನಡೆಸುವುದು ಅಮೇರಿಕಾದ ಸರ್ವಾದಿಕಾರಿ ನಡೆಯಾಗಿದೆ ಎಂದರು.‌

ಅಮೇರಿಕಾದ ಸರ್ವಾಧಿಕಾರಿ ನಡೆಯನ್ನು ಬೆಂಬಲಿಸುವುದು ಎಂದರೆ ಅದರ ಗುಲಾಮಗಿರಿಗೆ ಬಲಿಯಾದಂತೆ ಆಗಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರಿತುಕೊಂಡು ದೇಶದ ಸ್ವಾಬಿಮಾನದ ಗೌರವ ಉಳಿಸಬೇಕಿದೆ ಎಂದರು.

ಶ್ಯಾಮರಾಜ್ ಸ್ವಾಗತಿಸಿ, ಡಿ.ಎಚ್.ಎಸ್. ರಾಜ್ಯ ನಾಯಕಿ ಈಶ್ವರಿ ವಂದಿಸಿದರು. ಅಜಿ.ಎಂ.ಜೋಸ್, ಹಿರಿಯ ಮುಖಂಡರಾದ ಲಕ್ಷ್ಮಣ ಗೌಡ, ಜಯಶ್ರಿ, ಪುಷ್ಪ, ಮಹಿಳಾ ಮುಖಂಡರಾದ ಕಿರಣಪ್ರಭಾ , ಕುಮಾರಿ, ಡಿ.ವೈ.ಎಪ್.ಐ ಮುಖಂಡರಾದ ಅಭಿಷೇಕ್, ಆದಿವಾಸಿ ಸಂಘಟನೆಯ ಪ್ರವೀಣ್ ಎಂಕೆ. ಕಟ್ಟಡ ಸಂಘದ ಲೋಕೇಶ್, ಅಶ್ವಿತ, ಅಪ್ಸ, ಮೊದಲಾದವರು ಇದ್ದರು. ಕೊನೆಗೆ ತಹಶಿಲ್ದಾರ್ ಮೂಲಕ ಕೇಂದ್ರ ಸರಕಾರಕ್ಕೆ ಆಗ್ರಹ ಪತ್ರ ನೀಡಲಾಯ್ತು.

Related posts

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya
error: Content is protected !!