September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

ಕಡಿರುದ್ಯಾವರ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಸಂಸ್ಕೃತಿಯವರು ೨೦೨೫ನೇ ವರ್ಷದ ಗೌರವ ಪ್ರಶಸ್ತಿ ನೀಡಿ ಗೌರವಿಸಿದ ಕಡಿರುದ್ಯಾವರ ಗ್ರಾಮದ ವಳಂಬ್ರ ಲೋಕೇಶ್ಚರಿ ವಿನಯಚಂದ್ರ ರವರಿಗೆ ಸ್ಥಳೀಯ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ ಹಾಗೂ ಶ್ರೀ ವಿದ್ಯಾ ಸರಸ್ವತಿ ಸ್ವಸಹಾಯದ ವತಿಯಿಂದ ಮಹಿಳಾ ಮಂಡಲದಲ್ಲಿ ಸನ್ಮಾನಿಸಲಾಯಿತು. ಎರಡೂ ಸಂಸ್ಥೆಯ ಸದಸ್ಯರು ತಮ್ಮ ಗ್ರಾಮದವರಾದ ಲೋಕೇಶ್ವರಿಯವರ ವಿಶಿಷ್ಟ ಸಾಧನೆಯಿಂದ ಪಡೆದ ಈ ಪ್ರಶಸ್ತಿಗೆ ಅಭಿನಂದನೆ ಸಲ್ಲಿಸಿ, ತಮ್ಮಲ್ಲಿ ಓರ್ವರಾಗಿ ಎಲ್ಲ ಮಹಿಳಿಯರಿಗೆ ವಿವಿಧ ರೀತಿಯಲ್ಲಿ ಜಾತಿ, ಮತ, ಪಕ್ಷಭೇದ ಮರೆತು ಸಲ್ಲಿಸಿದ ನಿಸ್ವಾರ್ಥ ಸೇವೆಗೆ ದೊರೆತ ಸನ್ಮಾನ ತಮಗೆ ದೊರೆತದ್ದು ಸಂತೋಷವಾಗಿದೆ ಎಂದು ತಿಳಿಸಿ ಶಾಲು ಸ್ಮರಣಿಕೆ ಫಲಪುಷ್ಪ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಭಾರತಿ ಉಪಾಧ್ಯಕ್ಷೆ ರಮಾ ಎಸ್. ಪರಾಂಜಪೆ, ಕೋಶಾಧಿಕಾರಿ ಸಂಧ್ಯಾಕಿರಣ್, ಸದಸ್ಯರಾದ ಭವ್ಯಶ್ರೀ ಕೀರ್ತಿರಾಜ್, ಸೌಮ್ಯ, ರೋಸಮ್ಮ, ಲಿಸ್ಸಿ, ಶಿಭಾ, ವರದಾ ಭಾಯಿ, ವಸಂತಿ, ಡೀಕಮ್ಮ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ಶುಭಕೋರಿದರು. ಗ್ರಾಮಸ್ಥರ ಸಹಕಾರ ಹಾಗೂ ಪ್ರೋತ್ಸಾಹದಿಂದ ತನಗೆ ದೊರೆತ ಈ ಪ್ರಶಸ್ತಿಗೆ ತಾವೆಲ್ಲರೂ ಭಾಜನರು ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

Related posts

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya
error: Content is protected !!