23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

ಕಡಿರುದ್ಯಾವರ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಸಂಸ್ಕೃತಿಯವರು ೨೦೨೫ನೇ ವರ್ಷದ ಗೌರವ ಪ್ರಶಸ್ತಿ ನೀಡಿ ಗೌರವಿಸಿದ ಕಡಿರುದ್ಯಾವರ ಗ್ರಾಮದ ವಳಂಬ್ರ ಲೋಕೇಶ್ಚರಿ ವಿನಯಚಂದ್ರ ರವರಿಗೆ ಸ್ಥಳೀಯ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ ಹಾಗೂ ಶ್ರೀ ವಿದ್ಯಾ ಸರಸ್ವತಿ ಸ್ವಸಹಾಯದ ವತಿಯಿಂದ ಮಹಿಳಾ ಮಂಡಲದಲ್ಲಿ ಸನ್ಮಾನಿಸಲಾಯಿತು. ಎರಡೂ ಸಂಸ್ಥೆಯ ಸದಸ್ಯರು ತಮ್ಮ ಗ್ರಾಮದವರಾದ ಲೋಕೇಶ್ವರಿಯವರ ವಿಶಿಷ್ಟ ಸಾಧನೆಯಿಂದ ಪಡೆದ ಈ ಪ್ರಶಸ್ತಿಗೆ ಅಭಿನಂದನೆ ಸಲ್ಲಿಸಿ, ತಮ್ಮಲ್ಲಿ ಓರ್ವರಾಗಿ ಎಲ್ಲ ಮಹಿಳಿಯರಿಗೆ ವಿವಿಧ ರೀತಿಯಲ್ಲಿ ಜಾತಿ, ಮತ, ಪಕ್ಷಭೇದ ಮರೆತು ಸಲ್ಲಿಸಿದ ನಿಸ್ವಾರ್ಥ ಸೇವೆಗೆ ದೊರೆತ ಸನ್ಮಾನ ತಮಗೆ ದೊರೆತದ್ದು ಸಂತೋಷವಾಗಿದೆ ಎಂದು ತಿಳಿಸಿ ಶಾಲು ಸ್ಮರಣಿಕೆ ಫಲಪುಷ್ಪ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಭಾರತಿ ಉಪಾಧ್ಯಕ್ಷೆ ರಮಾ ಎಸ್. ಪರಾಂಜಪೆ, ಕೋಶಾಧಿಕಾರಿ ಸಂಧ್ಯಾಕಿರಣ್, ಸದಸ್ಯರಾದ ಭವ್ಯಶ್ರೀ ಕೀರ್ತಿರಾಜ್, ಸೌಮ್ಯ, ರೋಸಮ್ಮ, ಲಿಸ್ಸಿ, ಶಿಭಾ, ವರದಾ ಭಾಯಿ, ವಸಂತಿ, ಡೀಕಮ್ಮ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ಶುಭಕೋರಿದರು. ಗ್ರಾಮಸ್ಥರ ಸಹಕಾರ ಹಾಗೂ ಪ್ರೋತ್ಸಾಹದಿಂದ ತನಗೆ ದೊರೆತ ಈ ಪ್ರಶಸ್ತಿಗೆ ತಾವೆಲ್ಲರೂ ಭಾಜನರು ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

Related posts

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

Suddi Udaya
error: Content is protected !!