September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

ವೇಣೂರು :ಶ್ರೀ ವಿಶ್ವಕರ್ಮ ಸೇವಾ ಸಂಘದ 34ನೇ ವರ್ಷದ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ಸಂಘದಲ್ಲಿ ಜರಗಿತು.

ಹಂಸ ವುಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ಮಾಲಕ ಬಿ ಕೆ ಸತೀಶ್ ಆಚಾರ್ಯ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಾಜ ಬಾಂಧವರಿಗೆ ಹಲವಾರು ವಿಚಾರಗಳ ಮಾಹಿತಿಯನ್ನು ನೀಡುವುದರ ಜೊತೆಗೆ ಸೂಕ್ತವಾದ ಮಾರ್ಗದರ್ಶನವನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಎಸ್ ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ (ಲಿ) ಕೊಟ್ಟಾರ ಚೌಕಿ ಮಂಗಳೂರು ಇದರ ನಿರ್ದೇಶಕ ಮಂಜುನಾಥ ಆಚಾರ್ಯ ಅಳದಂಗಡಿ, ಶ್ರೀ ಕಾಳಿಕಾ ಡಿಜಿಟಲ್ ಪ್ರಿಂಟ್ಸ್ ಮೂಡಬಿದಿರೆ ಇದರ ಮಾಲಕಿ ಶಾಂತಲಾ ಸೀತಾರಾಮ ಅಚಾರ್ಯ, ಬ್ರಹ್ಮಶ್ರೀ ಎನ್ ಕೇಶವ ಪುರೋಹಿತ್ ಮೂಡಬಿದಿರೆ ಭಾಗವಹಿಸಿದ್ದರು.

ಸಂಘದ ಗೌರವಾಧ್ಯಕ್ಷ ಶ್ರೀಧರ ಅಚಾರ್ಯ ಖಂಡಿಗ, ಅಧ್ಯಕ್ಷ ಸತೀಶ ಆಚಾರ್ಯ ಕೈರೋಳಿ, ಶ್ರೀ ಕಾಳಿಕಾಂಬ ಮಹಿಳಾ ಮಂಡಳಿ ಇದರ ಅಧ್ಯಕ್ಷೆ ಮಾಲತಿ ರತ್ನಾಕರ ಉಪಸ್ಥಿತ ರಿದ್ದರು .

ಸೀತಾರಾಮ ಆಚಾರ್ಯ ಸ್ವಾಗತಿಸಿದರು. ಸುಧಾಕರ್ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಸತೀಶ್ ಆಚಾರ್ಯ ಧನ್ಯವಾದವಿತ್ತರು. ಬಿ ಹರಿಶ್ಚಂದ್ರ ಆಚಾರ್ಯ ವರದಿ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಎಸ್‌.ಡಿ.ಎಂ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya
error: Content is protected !!