ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಮಾ 22ರಂದು ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ” ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು.

ಸಾಂಸ್ಕೃತಿಕ ವೈಭವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಉದ್ಘಾಟಿಸಿ ಶುಭಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ,ಉದ್ಯಮಿ ಶಶಿಧರ ಶೆಟ್ಟಿ ಬರೋಡ,ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡುವೆಟ್ನಾಯ ಶುಭಹಾರೈಸಿದರು.

ವೇದಿಕೆಯಲ್ಲಿ ವಿ.ಪ.ಶಾಸಕ ಪ್ರತಾಪ ಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಾ.ಸತೀಶ್ಚಂದ್ರ ಎಸ್., ಅನಿಲ್ ಕುಮಾರ್ ಎಸ್. ಎಸ್., ಪೂರನ್ ವರ್ಮ, ಕೆ. ಮೋಹನ್ ಕುಮಾರ್,ಡಾ.ಎಂ.ಪಿ. ಶ್ರೀನಾಥ್, ಡಾ. ಹರ್ಷ ಸಂಪಿಗೆತ್ತಾಯ,ಮಚ್ಚಿಮಲೆ ಅನಂತ ಭಟ್, ವಸಂತ ಶೆಟ್ಟಿ ಶ್ರದ್ಧಾ,ರವೀಂದ್ರ ಶೆಟ್ಟಿ ಸುರಭಿ, ರಾಜೇಶ್ ಪ್ರೈ, ಡಾ. ಪ್ರದೀಪ್ ಆಟಿಕುಕ್ಕೆ, ಅರವಿಂದ ಕಾರಂತ್, ಶ್ರೇಯಾ ಶೆಟ್ಟಿ,ಉಮೇಶ್ ಶೆಟ್ಟಿ, ಅಶ್ವಿನಿ ಎ. ಹೆಬ್ಬಾರ್, ಪ್ರಕಾಶ ನಾರಾಯಣ ರಾವ್, ಡಾ!ಕುಮಾರ ಹೆಗ್ಡೆ ಪುಷ್ಪರಾಜ ಶೆಟ್ಟಿ ,ಬಿ.ಕೆ.ಧನಂಜಯ ರಾವ್,ಪ್ರಸಾದ್ ಬಿ.ಎಸ್,ಚಿದಾನಂದ ಇಡ್ಯ,ಗಣೇಶ್ ಗೌಡ,ಜಿತೇಶ್ ಜೈನ್, ಸೇರಿದಂತೆ ತಾಲೂಕಿನ ಪ್ರಮುಖರು ಉಪಸ್ಥಿತರಿದ್ದರು.

ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಅಂಬರೀಶ ಚಿಪಳೂಲ್ಕರ್ ಕಾರ್ಯಕ್ರಮ ಸಂಘಟಿಸಿದರು. ಉಜಿರೆ ರಥಬೀದಿಯಲ್ಲಿ ಆಯೋಜಿಸಿದ ಬೃಹತ್ ವೇದಿಕೆಯಲ್ಲಿ 3 ಗಂಟೆ ಕಾಲ ನಡೆದ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹಸ್ರಾರು ಕಲಾಭಿಮಾನಿಗಳು ಹೃದ್ಯವಾಗಿ ಆಸ್ವಾದಿಸಿದರು.

Related posts

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya
error: Content is protected !!