July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಮಾ 22ರಂದು ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ” ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು.

ಸಾಂಸ್ಕೃತಿಕ ವೈಭವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಉದ್ಘಾಟಿಸಿ ಶುಭಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ,ಉದ್ಯಮಿ ಶಶಿಧರ ಶೆಟ್ಟಿ ಬರೋಡ,ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡುವೆಟ್ನಾಯ ಶುಭಹಾರೈಸಿದರು.

ವೇದಿಕೆಯಲ್ಲಿ ವಿ.ಪ.ಶಾಸಕ ಪ್ರತಾಪ ಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಾ.ಸತೀಶ್ಚಂದ್ರ ಎಸ್., ಅನಿಲ್ ಕುಮಾರ್ ಎಸ್. ಎಸ್., ಪೂರನ್ ವರ್ಮ, ಕೆ. ಮೋಹನ್ ಕುಮಾರ್,ಡಾ.ಎಂ.ಪಿ. ಶ್ರೀನಾಥ್, ಡಾ. ಹರ್ಷ ಸಂಪಿಗೆತ್ತಾಯ,ಮಚ್ಚಿಮಲೆ ಅನಂತ ಭಟ್, ವಸಂತ ಶೆಟ್ಟಿ ಶ್ರದ್ಧಾ,ರವೀಂದ್ರ ಶೆಟ್ಟಿ ಸುರಭಿ, ರಾಜೇಶ್ ಪ್ರೈ, ಡಾ. ಪ್ರದೀಪ್ ಆಟಿಕುಕ್ಕೆ, ಅರವಿಂದ ಕಾರಂತ್, ಶ್ರೇಯಾ ಶೆಟ್ಟಿ,ಉಮೇಶ್ ಶೆಟ್ಟಿ, ಅಶ್ವಿನಿ ಎ. ಹೆಬ್ಬಾರ್, ಪ್ರಕಾಶ ನಾರಾಯಣ ರಾವ್, ಡಾ!ಕುಮಾರ ಹೆಗ್ಡೆ ಪುಷ್ಪರಾಜ ಶೆಟ್ಟಿ ,ಬಿ.ಕೆ.ಧನಂಜಯ ರಾವ್,ಪ್ರಸಾದ್ ಬಿ.ಎಸ್,ಚಿದಾನಂದ ಇಡ್ಯ,ಗಣೇಶ್ ಗೌಡ,ಜಿತೇಶ್ ಜೈನ್, ಸೇರಿದಂತೆ ತಾಲೂಕಿನ ಪ್ರಮುಖರು ಉಪಸ್ಥಿತರಿದ್ದರು.

ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಅಂಬರೀಶ ಚಿಪಳೂಲ್ಕರ್ ಕಾರ್ಯಕ್ರಮ ಸಂಘಟಿಸಿದರು. ಉಜಿರೆ ರಥಬೀದಿಯಲ್ಲಿ ಆಯೋಜಿಸಿದ ಬೃಹತ್ ವೇದಿಕೆಯಲ್ಲಿ 3 ಗಂಟೆ ಕಾಲ ನಡೆದ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹಸ್ರಾರು ಕಲಾಭಿಮಾನಿಗಳು ಹೃದ್ಯವಾಗಿ ಆಸ್ವಾದಿಸಿದರು.

Related posts

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ‘ಆಪ್ತ ಸಮಾಲೋಚನೆ ಮತ್ತು ವಿದ್ಯಾರ್ಥಿ ನಡವಳಿಕೆ’ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!