July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

ಕಳೆಂಜ: ಕಾಯರ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ ಕಾರ್ಯಕ್ರಮವು ಮಾ.22ರಂದು ನೆರವೇರಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಶಾಲೆಗಳ ಸಮಗ್ರ ಅಭಿವೃದ್ಧಿಗೆ ರ‍್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಳೆದ ಅವಧಿಯಲ್ಲಿ ವಿವೇಕ ಶಾಲಾ ಕೊಠಡಿ ಯೋಜನೆಯಡಿ ಈ ಶಾಲೆಗೆ ಎರಡು ಕೊಠಡಿಗಳನ್ನು ಒದಗಿಸಲಾಗಿತ್ತು. ಇದೀಗ ಶತಮಾನೋತ್ಸವದ ಹಿನ್ನೆಲೆ ಹೆಚ್ಚುವರಿ ತರಗತಿ ಕೊಠಡಿಗಳ ಅಗತ್ಯ ಉಂಟಾಗಿದ್ದು, ರ‍್ಕಾರದಿಂದ ಅನುದಾನ ಸಿಗದ ಹಿನ್ನೆಲೆ ಎಂಆರ್‌ಪಿಎಲ್ ಸಂಸ್ಥೆಯ ಸಿಎಸ್‌ಆರ್ ನಿಧಿ ಮೂಲಕ ಸಂಸದರ ಸಹಕಾರದೊಂದಿಗೆ ಇನ್ನೂ ಎರಡು ಕೊಠಡಿಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು
ತಿಳಿಸಿದರು. ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಂಡು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

ಇದೇ ವೇಳೆ ಧರ್ಮಸ್ಥಳ ಧರ್ಮಾಧಿಕಾರಿಗಳ ಸಂಸದರ ನಿಧಿಯಿಂದ ತಾಲೂಕಿನ ಎಲ್ಲಾ ಶಾಲೆಗಳಿಗೆ ಸ್ಮಾರ್ಟ್ ಟಿವಿ ವಿತರಿಸಲಾಗುತ್ತಿದ್ದು,ಕಾಯರ್ತಡ್ಕ ಶಾಲೆಯೂ ಇದರ ಪ್ರಯೋಜನ ಪಡೆದಿದೆ. ಇದು ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ, ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ, ಚಿಗುರು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ ಅಂಗರಂಡ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವಿಜಯ್ ಕೆ, ಕಾರ‍್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಿಜಯಕುಮಾರ್ ಹೆಚ್, ಮುಖ್ಯ ಶಿಕ್ಷಕ ಕೃಷ್ಣಪ್ಪ, ಪಂಚಾಯತ್ ನಿಕಟಪರ‍್ವ ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತಕಜೆ, ನಿಕಟಪರ‍್ವ ಸದಸ್ಯ ಹರೀಶ್ ಕೊಯ್ದ ಸೇರಿದಂತೆ ಅನೇಕ ಗಣ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಕೃಷ್ಣಪ್ಪ ಶಾಲೆಯ ಪರಿಚಯ ನೀಡಿ ಪ್ರಸ್ತಾವಿಕ ಭಾಷಣ ಮಾಡಿದರು. ಶಿಕ್ಷಕಿ ಲಾವಣ್ಯ ಸ್ವಾಗತಿಸಿದರು. ವಿದ್ಯಾರ್ಥಿಗಳ ಪ್ರಾರ್ಥನೆ ಸಲ್ಲಿಸಿದರು. ಶಿಕ್ಷಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ರೋಸಾ ವಿ.ಟಿ. ವಂದಿಸಿದರು.

Related posts

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

Suddi Udaya

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya
error: Content is protected !!