ಕೊಕ್ಕಡ: ಪಟ್ಟೂರಿನಿಂದ ಸೌತಡ್ಕಕ್ಕೆ ಬರುವ ವಸರಿಕಟ್ಟೆ ಎಂಬಲ್ಲಿ ಕಾಲೇಜಿನಿಂದ ಬಸ್ ನಲ್ಲಿ ಬಂದು ಇಳಿದು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಕಾಡಾನೆಯೊಂದು ಬೆನ್ನಟ್ಟಿದ ಘಟನೆ ಮಾ.23ರಂದು ಸಂಜೆ ನಡೆದಿದೆ.
ಅರಣ್ಯ ಅಧಿಕಾರಿಗಳಿಗೆ ಕೂಡಲೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರು ಜಾಗ್ರತೆ ವಹಿಸುವಂತೆ ಸೂಚನೆ ನೀಡುದ್ದು, ಆ ರಸ್ತೆಯಲ್ಲಿ ಗ್ರಾಮಸ್ಥರು ಹೋಗದಂತೆ ಮಾಹಿತಿ ನೀಡುತ್ತಿದ್ದಾರೆ. ಈ ಆನೆ 2-3 ದಿನದಿಂದ ಇದೇ ಪರಿಸರದಲ್ಲಿ ಅಲ್ಲಲ್ಲಿ ಕಂಡು ಬರುತ್ತಿತ್ತು ಎನ್ನಲಾಗಿದೆ.












