25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಯುದ್ದ ಖಂಡಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳ‌ ಪ್ರತಿಭಟನೆ

ಬೆಳ್ತಂಗಡಿ: ಇಡೀ ಜಗತ್ತಿನ‌ ತೈಲ ಉತ್ಪಾದನೆ, ವಿತರಣೆಯ ಸಂಪೂರ್ಣ ಹಿಡಿತ ತನ್ನ ಹಸ್ತ ಬರಲು ಅಮೇರಿಕ ನಡೆಸುವ ಈ ಅಕ್ರಮ ಯುದ್ದಗಳ ತಡೆಯಲು ಭಾರತ ಮುಂದಾಗಬೇಕೆಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ.ಯಾಧವ ಶೆಟ್ಟಿ ಅಗ್ರಹಿಸಿದರು.

ಅವರು ಇಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು , ಎಐಕೆಎಸ್, ಡಿ.ವೈಎಪ್‌.ಐ., ಜೆ.ಎಂ.ಎಸ್, ಡಿ.ಎಚ್.ಎಸ್. ಆದಿವಾಸಿ ಮೊದಲಾದ ಸಂಘಟನೆಗಳು ಅಮೇರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುವ ಯುದ್ದ ಖಂಡಿಸಿ ನಡೆಸಿದ ಪ್ರತಿಭಟನೆಯನ್ನುದ್ದೇಶಿ ಮಾತಾಡುತ್ತಿದ್ದರು.

ಸಿಐಟಿಯು ದ.ಕ. ಜಿಲ್ಲಾಧ್ಯಕ್ಷರಾದ ಬಿ.ಎಂ.ಭಟ್ ಮಾತಾಡುತ್ತಾ ಒಂದು ದೇಶ ಮತ್ತೊಂದು ದೇಶದ ಸಾರ್ವಭೌಮತೆಯ ಮೇಲೆ‌ ದಾಳಿ ನಡೆಸುವುದು ಅಮೇರಿಕಾದ ಸರ್ವಾದಿಕಾರಿ ನಡೆಯಾಗಿದೆ ಎಂದರು.‌

ಅಮೇರಿಕಾದ ಸರ್ವಾಧಿಕಾರಿ ನಡೆಯನ್ನು ಬೆಂಬಲಿಸುವುದು ಎಂದರೆ ಅದರ ಗುಲಾಮಗಿರಿಗೆ ಬಲಿಯಾದಂತೆ ಆಗಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರಿತುಕೊಂಡು ದೇಶದ ಸ್ವಾಬಿಮಾನದ ಗೌರವ ಉಳಿಸಬೇಕಿದೆ ಎಂದರು.

ಶ್ಯಾಮರಾಜ್ ಸ್ವಾಗತಿಸಿ, ಡಿ.ಎಚ್.ಎಸ್. ರಾಜ್ಯ ನಾಯಕಿ ಈಶ್ವರಿ ವಂದಿಸಿದರು. ಅಜಿ.ಎಂ.ಜೋಸ್, ಹಿರಿಯ ಮುಖಂಡರಾದ ಲಕ್ಷ್ಮಣ ಗೌಡ, ಜಯಶ್ರಿ, ಪುಷ್ಪ, ಮಹಿಳಾ ಮುಖಂಡರಾದ ಕಿರಣಪ್ರಭಾ , ಕುಮಾರಿ, ಡಿ.ವೈ.ಎಪ್.ಐ ಮುಖಂಡರಾದ ಅಭಿಷೇಕ್, ಆದಿವಾಸಿ ಸಂಘಟನೆಯ ಪ್ರವೀಣ್ ಎಂಕೆ. ಕಟ್ಟಡ ಸಂಘದ ಲೋಕೇಶ್, ಅಶ್ವಿತ, ಅಪ್ಸ, ಮೊದಲಾದವರು ಇದ್ದರು. ಕೊನೆಗೆ ತಹಶಿಲ್ದಾರ್ ಮೂಲಕ ಕೇಂದ್ರ ಸರಕಾರಕ್ಕೆ ಆಗ್ರಹ ಪತ್ರ ನೀಡಲಾಯ್ತು.

Related posts

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya
error: Content is protected !!