September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಯುದ್ದ ಖಂಡಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳ‌ ಪ್ರತಿಭಟನೆ

ಬೆಳ್ತಂಗಡಿ: ಇಡೀ ಜಗತ್ತಿನ‌ ತೈಲ ಉತ್ಪಾದನೆ, ವಿತರಣೆಯ ಸಂಪೂರ್ಣ ಹಿಡಿತ ತನ್ನ ಹಸ್ತ ಬರಲು ಅಮೇರಿಕ ನಡೆಸುವ ಈ ಅಕ್ರಮ ಯುದ್ದಗಳ ತಡೆಯಲು ಭಾರತ ಮುಂದಾಗಬೇಕೆಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ.ಯಾಧವ ಶೆಟ್ಟಿ ಅಗ್ರಹಿಸಿದರು.

ಅವರು ಇಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು , ಎಐಕೆಎಸ್, ಡಿ.ವೈಎಪ್‌.ಐ., ಜೆ.ಎಂ.ಎಸ್, ಡಿ.ಎಚ್.ಎಸ್. ಆದಿವಾಸಿ ಮೊದಲಾದ ಸಂಘಟನೆಗಳು ಅಮೇರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುವ ಯುದ್ದ ಖಂಡಿಸಿ ನಡೆಸಿದ ಪ್ರತಿಭಟನೆಯನ್ನುದ್ದೇಶಿ ಮಾತಾಡುತ್ತಿದ್ದರು.

ಸಿಐಟಿಯು ದ.ಕ. ಜಿಲ್ಲಾಧ್ಯಕ್ಷರಾದ ಬಿ.ಎಂ.ಭಟ್ ಮಾತಾಡುತ್ತಾ ಒಂದು ದೇಶ ಮತ್ತೊಂದು ದೇಶದ ಸಾರ್ವಭೌಮತೆಯ ಮೇಲೆ‌ ದಾಳಿ ನಡೆಸುವುದು ಅಮೇರಿಕಾದ ಸರ್ವಾದಿಕಾರಿ ನಡೆಯಾಗಿದೆ ಎಂದರು.‌

ಅಮೇರಿಕಾದ ಸರ್ವಾಧಿಕಾರಿ ನಡೆಯನ್ನು ಬೆಂಬಲಿಸುವುದು ಎಂದರೆ ಅದರ ಗುಲಾಮಗಿರಿಗೆ ಬಲಿಯಾದಂತೆ ಆಗಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರಿತುಕೊಂಡು ದೇಶದ ಸ್ವಾಬಿಮಾನದ ಗೌರವ ಉಳಿಸಬೇಕಿದೆ ಎಂದರು.

ಶ್ಯಾಮರಾಜ್ ಸ್ವಾಗತಿಸಿ, ಡಿ.ಎಚ್.ಎಸ್. ರಾಜ್ಯ ನಾಯಕಿ ಈಶ್ವರಿ ವಂದಿಸಿದರು. ಅಜಿ.ಎಂ.ಜೋಸ್, ಹಿರಿಯ ಮುಖಂಡರಾದ ಲಕ್ಷ್ಮಣ ಗೌಡ, ಜಯಶ್ರಿ, ಪುಷ್ಪ, ಮಹಿಳಾ ಮುಖಂಡರಾದ ಕಿರಣಪ್ರಭಾ , ಕುಮಾರಿ, ಡಿ.ವೈ.ಎಪ್.ಐ ಮುಖಂಡರಾದ ಅಭಿಷೇಕ್, ಆದಿವಾಸಿ ಸಂಘಟನೆಯ ಪ್ರವೀಣ್ ಎಂಕೆ. ಕಟ್ಟಡ ಸಂಘದ ಲೋಕೇಶ್, ಅಶ್ವಿತ, ಅಪ್ಸ, ಮೊದಲಾದವರು ಇದ್ದರು. ಕೊನೆಗೆ ತಹಶಿಲ್ದಾರ್ ಮೂಲಕ ಕೇಂದ್ರ ಸರಕಾರಕ್ಕೆ ಆಗ್ರಹ ಪತ್ರ ನೀಡಲಾಯ್ತು.

Related posts

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

Suddi Udaya

ಕರಂಬಾರು: ಕಾಜಿಮುಗೇರು ನಿವಾಸಿ ಸುಗುಣಾ ಬಾಪಟ್ ನಿಧನ

Suddi Udaya

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

Suddi Udaya
error: Content is protected !!