July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಯುದ್ದ ಖಂಡಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳ‌ ಪ್ರತಿಭಟನೆ

ಬೆಳ್ತಂಗಡಿ: ಇಡೀ ಜಗತ್ತಿನ‌ ತೈಲ ಉತ್ಪಾದನೆ, ವಿತರಣೆಯ ಸಂಪೂರ್ಣ ಹಿಡಿತ ತನ್ನ ಹಸ್ತ ಬರಲು ಅಮೇರಿಕ ನಡೆಸುವ ಈ ಅಕ್ರಮ ಯುದ್ದಗಳ ತಡೆಯಲು ಭಾರತ ಮುಂದಾಗಬೇಕೆಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ.ಯಾಧವ ಶೆಟ್ಟಿ ಅಗ್ರಹಿಸಿದರು.

ಅವರು ಇಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು , ಎಐಕೆಎಸ್, ಡಿ.ವೈಎಪ್‌.ಐ., ಜೆ.ಎಂ.ಎಸ್, ಡಿ.ಎಚ್.ಎಸ್. ಆದಿವಾಸಿ ಮೊದಲಾದ ಸಂಘಟನೆಗಳು ಅಮೇರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುವ ಯುದ್ದ ಖಂಡಿಸಿ ನಡೆಸಿದ ಪ್ರತಿಭಟನೆಯನ್ನುದ್ದೇಶಿ ಮಾತಾಡುತ್ತಿದ್ದರು.

ಸಿಐಟಿಯು ದ.ಕ. ಜಿಲ್ಲಾಧ್ಯಕ್ಷರಾದ ಬಿ.ಎಂ.ಭಟ್ ಮಾತಾಡುತ್ತಾ ಒಂದು ದೇಶ ಮತ್ತೊಂದು ದೇಶದ ಸಾರ್ವಭೌಮತೆಯ ಮೇಲೆ‌ ದಾಳಿ ನಡೆಸುವುದು ಅಮೇರಿಕಾದ ಸರ್ವಾದಿಕಾರಿ ನಡೆಯಾಗಿದೆ ಎಂದರು.‌

ಅಮೇರಿಕಾದ ಸರ್ವಾಧಿಕಾರಿ ನಡೆಯನ್ನು ಬೆಂಬಲಿಸುವುದು ಎಂದರೆ ಅದರ ಗುಲಾಮಗಿರಿಗೆ ಬಲಿಯಾದಂತೆ ಆಗಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರಿತುಕೊಂಡು ದೇಶದ ಸ್ವಾಬಿಮಾನದ ಗೌರವ ಉಳಿಸಬೇಕಿದೆ ಎಂದರು.

ಶ್ಯಾಮರಾಜ್ ಸ್ವಾಗತಿಸಿ, ಡಿ.ಎಚ್.ಎಸ್. ರಾಜ್ಯ ನಾಯಕಿ ಈಶ್ವರಿ ವಂದಿಸಿದರು. ಅಜಿ.ಎಂ.ಜೋಸ್, ಹಿರಿಯ ಮುಖಂಡರಾದ ಲಕ್ಷ್ಮಣ ಗೌಡ, ಜಯಶ್ರಿ, ಪುಷ್ಪ, ಮಹಿಳಾ ಮುಖಂಡರಾದ ಕಿರಣಪ್ರಭಾ , ಕುಮಾರಿ, ಡಿ.ವೈ.ಎಪ್.ಐ ಮುಖಂಡರಾದ ಅಭಿಷೇಕ್, ಆದಿವಾಸಿ ಸಂಘಟನೆಯ ಪ್ರವೀಣ್ ಎಂಕೆ. ಕಟ್ಟಡ ಸಂಘದ ಲೋಕೇಶ್, ಅಶ್ವಿತ, ಅಪ್ಸ, ಮೊದಲಾದವರು ಇದ್ದರು. ಕೊನೆಗೆ ತಹಶಿಲ್ದಾರ್ ಮೂಲಕ ಕೇಂದ್ರ ಸರಕಾರಕ್ಕೆ ಆಗ್ರಹ ಪತ್ರ ನೀಡಲಾಯ್ತು.

Related posts

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya
error: Content is protected !!